Home Uncategorized Pressmeet: ನಾನು ಹಿಟ್ ಅಂಡ್ ರನ್ ಮಾಡಿಲ್ಲ, ಜೀವದ ಬೆಲೆ ಗೊತ್ತಿದೆ: ನಟ ನಾಗಭೂಷಣ್‌ ಭಾವುಕ!

Pressmeet: ನಾನು ಹಿಟ್ ಅಂಡ್ ರನ್ ಮಾಡಿಲ್ಲ, ಜೀವದ ಬೆಲೆ ಗೊತ್ತಿದೆ: ನಟ ನಾಗಭೂಷಣ್‌ ಭಾವುಕ!

45
0
 ಕಾರು ಅಪಘಾತಕ್ಕೆ ಸಂಬಂಧಿಸಿದಂತೆ ಹಲವು ದಿನಗಳ ನಂತರ ಮಾಧ್ಯಮಗಳ ಮುಂದೆ ಮುಖಾಮುಖಿಯಾಗಿದ್ದಾರೆ ನಟ ನಾಗಭೂಷಣ್. ಘಟನೆ ನಡೆದ ನಂತರ ಮಾನಸಿಕವಾಗಿ ತುಂಬಾ ನೊಂದುಕೊಂಡಿದ್ದೆ. ಹಾಗಾಗಿ ನನ್ನ ಪ್ರತಿಕ್ರಿಯೆಯನ್ನು ನೀಡಲು ಆಗಲಿಲ್ಲ ಎಂದ ಅವರು, ಆ ನೋವಿನಿಂದ ಹೊರ ಬರುವುದಕ್ಕೂ ಇನ್ನೂ ನನಗೆ ತುಂಬಾ ಸಮಯ ಬೇಕು. ಅದು ಹಿಟ್ ಅಂಡ್ ರನ್ ಕೇಸ್ ಅಲ್ಲ, ನಾನು ಅಲ್ಲಿಯೇ ಇದ್ದೆ. ಕಾನೂನು ಪ್ರಕ್ರಿಯೆಗೆ ಸಹಕರಿಸಿದ್ದೇನೆ ಎಂದಿದ್ದಾರೆ.
ಕುಮಾರಸ್ವಾಮಿ ಲೇಔಟ್ ವ್ಯಾಪ್ತಿಯಲ್ಲಿ ನಡೆದ ನಟ ನಾಗಭೂಷಣ್ (Nagbhushan) ಕಾರು ಅಪಘಾತವನ್ನು ಹಿಟ್ ಅಂಡ್ ರನ್ ಕೇಸು ಎಂದು ಹಲವರು ಆರೋಪ ಮಾಡುತ್ತಿದ್ದರು. ಇದಕ್ಕೆ ಸಂಬಂಧಿಸಿಂದತೆ ನಟ ನಾಗಭೂಷಣ್ ಪ್ರತಿಕ್ರಿಯೆ ನೀಡಿದ್ದಾರೆ. ಅಪಘಾತವಾದ ನಂತರ ನಾನು ಎಲ್ಲಿಗೂ ಓಡಿ ಹೋಗಿಲ್ಲ. ನನ್ನ ಕಾರು ಅಲ್ಲಿಯೇ ಇತ್ತು. ನಾನು ಗಾಯಾಳುವನ್ನು ಆಸ್ಪತ್ರೆಗೆ ಸೇರಿಸುವ ಪ್ರಯತ್ನ ಮಾಡಿದೆ. ಪೊಲೀಸರ ತನಿಖೆಗೂ ನಾನು ಹೋಗಿರುವೆ. ದಯವಿಟ್ಟು ಹಿಟ್ ಅಂಡ್ ರನ್ ಕೇಸು ಎಂದು ಕರೆಯಬೇಡಿ’ ಎಂದರು.
ನಾಗಭೂಷಣ್ ಅವರ ತಂದೆ ಇಂಥದ್ದೇ ಅಪಘಾತದಲ್ಲಿ ನಿಧನರಾಗಿದ್ದು, ಈವರೆಗೂ ಆ ಅಪಘಾತ ಮಾಡಿದವರು ಯಾರು ಎನ್ನುವುದು ಗೊತ್ತಿಲ್ಲ. ‘ಗೌರಿ ಹಬ್ಬದ ದಿನದಂದು ನನ್ನ ತಂದೆಯು ಇಂಥದ್ದೇ ಕಾರು ಅಪಘಾತದಲ್ಲಿ ನಿಧನರಾದರು. ಅದನ್ನು ಮಾಡಿದ್ದು ಯಾರು ಎನ್ನುವುದು ಈವರೆಗೂ ನಮಗೆ ಗೊತ್ತಿಲ್ಲ. ಅಪಘಾತ ಮಾಡಿದ ನಂತರ ಯಾರೂ ಓಡಿ ಹೋಗಬೇಡಿ. ಗಾಯಾಳುಗಳನ್ನು ಆಸ್ಪತ್ರೆಗೆ ಸೇರಿಸಿ. ನನ್ನ ತಂದೆಯ ಘಟನೆಯಿಂದ ನಾನು ಕಲಿತದ್ದು ಇದನ್ನೆ’ ಅಂದರು.
ಅಕ್ಟೋಬರ್ 30ರಂದು ರಾತ್ರಿ 9 ಗಂಟೆಯ ಹೊತ್ತಿಗೆ ಕುಮಾರಸ್ವಾಮಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಕಾರು ಅಪಘಾತದಲ್ಲಿ (Car accident) ಪ್ರೇಮಾ ಎನ್ನುವ ಮಹಿಳೆ ಸಾವನ್ನಪ್ಪಿ, ಅವರ ಪತಿ ಗಂಭೀರವಾಗಿ ಗಾಯಗೊಂಡಿದ್ದರು. ಪತಿ ಕೃಷ್ಣ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ನಟ ನಾಗಭೂಷಣ್ (Nagbhushan) ಈ ಅಪಘಾತಕ್ಕೆ ಕಾರಣವಾಗಿದ್ದು, ನಟನನ್ನು ಕುಮಾರಸ್ವಾಮಿ ಪೋಲಿಸರು ಬಂಧಿಸಿ ನಂತರ ಸ್ಟೇಶನ್ ಬೇಲ್ ಮೇಲೆ ಬಿಡುಗಡೆ ಮಾಡಿದ್ದಾರೆ.  ಈ ಘಟನೆಯ ಕುರಿತು ಸ್ವತ ನಾಗಭೂಷಣ್ ಕೂಡ ಪೊಲೀಸರ ಮುಂದೆ ಹೇಳಿಕೆಯನ್ನು ದಾಖಲಿಸಿದ್ದರು.

The post Pressmeet: ನಾನು ಹಿಟ್ ಅಂಡ್ ರನ್ ಮಾಡಿಲ್ಲ, ಜೀವದ ಬೆಲೆ ಗೊತ್ತಿದೆ: ನಟ ನಾಗಭೂಷಣ್‌ ಭಾವುಕ! appeared first on Ain Live News.

LEAVE A REPLY

Please enter your comment!
Please enter your name here