Home ಬೆಂಗಳೂರು ನಗರ ಫೀಲ್ಡ್ ಕಮಾಂಡರ್ ರೀತಿ ಕೆಲಸ ಮಾಡುವಂತೆ ಮೋದಿ ಸೂಚನೆ- ಬಸವರಾಜ ಬೊಮ್ಮಾಯಿ

ಫೀಲ್ಡ್ ಕಮಾಂಡರ್ ರೀತಿ ಕೆಲಸ ಮಾಡುವಂತೆ ಮೋದಿ ಸೂಚನೆ- ಬಸವರಾಜ ಬೊಮ್ಮಾಯಿ

37
0
Advertisement
bengaluru

ಬೆಂಗಳೂರು:

ಜಿಲ್ಲೆಯ ಜನಪ್ರತಿನಿಧಿಗಳು, ಜಿಲ್ಲಾಧಿಕಾರಿ ಸೇರಿದಂತೆ ಜಿಲ್ಲಾ ಮಟ್ಟದ ಎಲ್ಲಾ ಅಧಿಕಾರಿಗಳು ಕೊರೊನಾ ವಿರುದ್ಧ ಫೀಲ್ಡ್ ಕಮಾಂಡರ್ ರೀತಿಯಲ್ಲಿ ಕೆಲಸ ಮಾಡುವಂತೆ ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ ಎಂದು ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಬಸವರಾಜ ತಿಳಿಸಿದರು.

ಮಂಗಳವಾರ ಬೆಂಗಳೂರಿನ ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಜತೆ ವಿಡಿಯೋ ಕಾನ್ಫರೆನ್ಸ್ ನಲ್ಲಿ ಭಾಗವಹಿಸಿದ ನಂತರ ಸುದ್ದಿಗಾರರಿಗೆ ಅವರು ಈ ವಿಷಯ ತಿಳಿಸಿದರು.

ಲಾಕ್ಡೌನ್ ಗೆ ಸಂಬಂಧಪಟ್ಟಂತೆ ಇಂದಿನ ಸಭೆಯಲ್ಲಿ ಯಾವುದೇ ಚರ್ಚೆಯಾಗಲಿಲ್ಲ. ಆದರೆ ಈ ಕುರಿತ ತೀರ್ಮಾನ ಕೈಗೊಳ್ಳುವ ಅಧಿಕಾರವನ್ನು ಪ್ರಧಾನಿಗಳು ರಾಜ್ಯಸರ್ಕಾರಕ್ಕೆ ನೀಡಿದ್ದಾರೆ. ಲಾಕ್ಡೌನ್ ಬಗ್ಗೆ ಮುಖ್ಯಮಂತ್ರಿಗಳು ಸೂಕ್ತ ನಿರ್ಧಾರ ಕೈಗೊಳ್ಳುತ್ತಾರೆ.

ಬಸವರಾಜ್ ಬೊಮ್ಮಾಯಿ — ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವರು

ರಾಜ್ಯ ಸರ್ಕಾರದ ಮುಖ್ಯ ಆದೇಶಗಳನ್ನು ಸ್ಥಳೀಯ ಮಟ್ಟದಲ್ಲಿ ಕಾರ್ಯಗತಗೊಳಿಸಬೇಕಾದ ಜವಾಬ್ದಾರಿ ಜಿಲ್ಲಾಧಿಕಾರಿಗಳದ್ದು. ಅದರ ಮೇಲುಸ್ತುವಾರಿ ಜಿಲ್ಲೆಯ ಜನಪ್ರತಿನಿಧಿಗಳದ್ದು. ಈ ಕೆಲಸವನ್ನು ಕೇವಲ ಜಿಲ್ಲಾಧಿಕಾರಿ ಅಲ್ಲದೆ ಜಿಲ್ಲಾ ಮಟ್ಟದ ಎಲ್ಲ ಪ್ರಮುಖ‌ ಅಧಿಕಾರಿಗಳು ಮಾಡಬೇಕಾಗಿದೆ. ಸ್ಥಳೀಯವಾಗಿ ಕೆಲ ಬದಲಾವಣೆಗಳ ಜೊತೆಗೆ ಕೋವಿಡ್ ನಿಯಂತ್ರಣ ಕ್ರಮಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಕ್ಕೆ ತರಬೇಕಾದ ಅಗತ್ಯವಿದೆ ಎಂಬುದು ಮೋದಿಯವರ ಪ್ರತಿಪಾದನೆ ಎಂದು ಬೊಮ್ಮಾಯಿ ತಿಳಿಸಿದರು.

bengaluru bengaluru

ಕೋವಿಡ್ 3ನೇ ಅಲೆ ಮಕ್ಕಳ ಮೇಲೆ ಹೆಚ್ಚು ಪ್ರಭಾವ ಬೀರಬಹುದು ಎನ್ನಲಾಗುತ್ತಿದೆ. ಆದ್ದರಿಂದ ಮಕ್ಕಳಿಗೆ ಸ್ಥಳೀಯ ಭಾಷೆಯಲ್ಲಿ ಕಾರ್ಟೂನ್, ಲೇಖನ, ಕಥೆ ಮುಂತಾದವುಗಳ ಮೂಲಕ ಹೆಚ್ಚು ಜಾಗೃತಿ ಮೂಡಿಸುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವಂತೆ ರಾಜ್ಯಸರ್ಕಾರಗಳಿಗೆ ಮೋದಿ ಸೂಚನೆ ನೀಡಿದರು. ಮಕ್ಕಳ ತಿಳುವಳಿಕೆ ಮಟ್ಟಕ್ಕೆ ಇಳಿದು ಜಾಗೃತಿ ಕಾರ್ಯಕ್ರಮಗಳನ್ನು ರೂಪಿಸಬೇಕೆಂದು ಅವರು ಸರ್ಕಾರಗಳಿಗೆ ಸಲಹೆ ನೀಡಿದರು.

ಗ್ರಾಮೀಣ ಮತ್ತು ಉಪನಗರ ಪ್ರದೇಶಗಳಲ್ಲಿ ಕೋವಿಡ್ ವ್ಯಾಪಕವಾಗಿ ಹರಡುತ್ತಿದೆ. ಇದನ್ನು ನಿಯಂತ್ರಿಸುವುದು ದೊಡ್ಡ ಸವಾಲು. ಈ ಕೆಲಸಕ್ಕಾಗಿ ಗ್ರಾಮ ಪಂಚಾಯಿತಿಗಳ ಮಟ್ಟದಲ್ಲಿ ಕಾರ್ಯಪಡೆ ರಚನೆ ಮಾಡಬೇಕು. ಸ್ತ್ರೀಶಕ್ತಿ, ಮಹಿಳಾ ಮತ್ತು ಯುವಕರ ಸಂಘ-ಸಂಸ್ಥೆಗಳ ನೆರವು ಪಡೆಯಬೇಕು. ಸೋಂಕಿತ ವ್ಯಕ್ತಿಯ ಪ್ರಥಮ ಮತ್ತು ದ್ವಿತೀಯ ಸಂಪರ್ಕಿತರ ಮೇಲೆ ನಿಗಾ ಇರಿಸಿ ಅವರಿಗೆ ಸೋಂಕು ತಗಲದಂತೆ ಮಾಡಿದರೆ ನಿಯಂತ್ರಣ ಸಾಧ್ಯ ಎಂದು ಮೋದಿ ತಿಳಿಸಿದ್ದಾರೆ. ಈ ಕೆಲಸದಲ್ಲಿ ಜನಪ್ರತಿನಿಧಿಗಳು ಪಕ್ಷಭೇದ ಮರೆತು ಕೆಲಸ ಮಾಡಿದರೆ ಮಾತ್ರ ಕೋವಿಡ್ ವಿರುದ್ಧ ಜಯ ಸಾಧ್ಯ ಎಂಬ ಸಂದೇಶವನ್ನು ಮೋದಿ ಸಾರಿದರು ಎಂದು ಬೊಮ್ಮಾಯಿ ತಿಳಿಸಿದರು.


bengaluru

LEAVE A REPLY

Please enter your comment!
Please enter your name here