Home ಕರ್ನಾಟಕ Bengaluru: ಏಪ್ರಿಲ್ 14 ರಂದು ಪ್ರಧಾನಿಯವರಿಂದ ಚಿಕ್ಕಬಳ್ಳಾಪುರ, ಹೆಬ್ಬಾಳ, ಬ್ಯಾಟರಾಯನಪುರದಲ್ಲಿ ರೋಡ್ ಶೋ

Bengaluru: ಏಪ್ರಿಲ್ 14 ರಂದು ಪ್ರಧಾನಿಯವರಿಂದ ಚಿಕ್ಕಬಳ್ಳಾಪುರ, ಹೆಬ್ಬಾಳ, ಬ್ಯಾಟರಾಯನಪುರದಲ್ಲಿ ರೋಡ್ ಶೋ

24
0
Prime Minister to conduct Road show at Chikkaballapur, Hebbal, Byatarayanapura on April 14

ಬೆಂಗಳೂರು: ಪ್ರಧಾನಿ ನರೇಂದ್ರ ಮೊದಿಯವರು ಚುನಾವಣಾ ಪ್ರಚಾರಕ್ಕಾಗಿ ಏಪ್ರಿಲ್ 14 ರಂದು ರಾಜ್ಯಕ್ಕೆ ಆಗಮಿಸಲಿದ್ದಾರೆ.

ಚಿಕ್ಕಬಳ್ಳಾಪುರ ಮತ್ತು ಬೆಂಗಳೂರಿನಲ್ಲಿ ಪ್ರಧಾನಿ ಬಿರುಸಿನ ಪ್ರಚಾರ ನಡೆಸಲಿದ್ದಾರೆ. ಚಿಕ್ಕಬಳ್ಳಾಪುರ ಕ್ಷೇತ್ರದ ದೇವನಹಳ್ಳಿಯಲ್ಲಿ ಏಪ್ರಿಲ್ 14 ರಂದು ಮಧ್ಯಾಹ್ನ 3 ಗಂಟೆಗೆ ಬೃಹತ್ ಸಾರ್ವಜನಿಕ ಸಭೆ ಆಯೋಜಿಸಲಾಗಿದೆ. ಅಲ್ಲದೆ, ಅದೇ ದಿನ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದಲ್ಲಿ ಬೃಹತ್ ರೋಡ್ ಶೋ ನಡೆಸಲು ಯೋಜಿಸಲಾಗಿದೆ.

ಬೆಂಗಳೂರಿನ ಎರಡು ವಿಧಾನಸಭಾ ಕ್ಷೇತ್ರಗಳನ್ನು ಒಳಗೊಂಡ ರೋಡ್ ಶೋ ನಡೆಸಲು ಯೋಜನೆ ರೂಪಿಸಲಾಗಿದೆ. ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಬ್ಯಾಟರಾಯನಪುರ ಮತ್ತು ಹೆಬ್ಬಾಳ ಕ್ಷೇತ್ರಗಳನ್ನು ಒಳಗೊಂಡು ರೋಡ್ ಶೋ ನಡೆಸುವ ಸಾಧ್ಯತೆ ಇದೆ.

LEAVE A REPLY

Please enter your comment!
Please enter your name here