ಬೆಂಗಳೂರು:
ರಾಜ್ಯಾದ್ಯಂತ ಬುಧವಾರದಿಂದ ಪಿಯುಸಿ ಹಾಗೂ ಪದವಿ ಕಾಲೇಜುಗಳು ಆರಂಭವಾಗಲಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿಸಿ ನಾಗೇಶ್ ತಿಳಿಸಿದ್ದಾರೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ಸೋಮವಾರ ರಾತ್ರಿ ಗೃಹ ಸಚಿವ ಆರಗ ಜ್ಞಾನೇಂದ್ರ ಹಾಗೂ ಉನ್ನತ ಶಿಕ್ಷಣ ಶಿಕ್ಷಣ ಡಾ.ಅಶ್ವತ್ಥ ನಾರಾಯಣ ಹಾಗೂ ಅಧಿಕಾರಿಗಳೊದಿಗೆ ನಡೆದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಅವರು ಟ್ವೀಟ್ ಮಾಡಿದ್ದಾರೆ.
ಫೆ.16ರಿಂದ ಪಿಯು (1&2) ಕಾಲೇಜುಗಳನ್ನು ಪುನಾರಂಭಿಸಲು ಮುಖ್ಯಮಂತ್ರಿ @BSBommai ಅವರ ಅಧ್ಯಕ್ಷತೆಯಲ್ಲಿ ಸಚಿವರಾದ @JnanendraAraga @drashwathcn ಹಾಗೂ ಅಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ ತೀರ್ಮಾನಿಸಲಾಗಿದೆ.
— B.C Nagesh (@BCNagesh_bjp) February 14, 2022
ಕಾಲೇಜು ಪುನಾರಂಭದ ವೇಳೆ ಅಗತ್ಯ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲು ಮುಖ್ಯಮಂತ್ರಿಯವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಕಾಲೇಜ್ ಪುನಾರಾರಂಭ ವೇಳೆ ಅಗತ್ಯ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲು ಮುಖ್ಯಮಂತ್ರಿ ಬೊಮ್ಮಾಯಿ ಅಧಿಕಾರಿಗಳಿಗೆ ಸೂಚಿಸಿದ್ದಾರೆ ಎಂದು ಅವರು ತಿಳಿಸಿದ್ದಾರೆ.
Also Read: Hijab row: Pre-university, degree colleges in Karnataka to reopen from Feb 16