ಬೆಂಗಳೂರು;- ಹಿಂದೂ ಪರ ಸಂಘಟನೆಯ ಮುಖಂಡ ಪುನೀತ್ ಕೆರೆಹಳ್ಳಿ ವಿರುದ್ಧ ಮತ್ತೊಂದು ಪ್ರಕರಣ ದಾಖಲಾಗಿದೆ.
ಆತ್ಮಹತ್ಯೆ ಯತ್ನದ ಆರೋಪದಡಿ FIR ದಾಖಲಾಗಿದೆ. ನಗರದ ಫ್ರೀಡಂ ಪಾರ್ಕ್ನಲ್ಲಿ ಉಪವಾಸ ಸತ್ಯಾಗ್ರಹಕ್ಕೆ ಕುಳಿತಿದ್ದ ಪುನೀತ್ ಕೆರೆಹಳ್ಳಿ, ತನ್ನ ವಿರುದ್ಧ ವಿವಿಧ ಠಾಣೆಗಳಲ್ಲಿ ಸುಳ್ಳು ಪ್ರಕರಣಗಳನ್ನು ದಾಖಲಿಸಿ, ರೌಡಿಪಟ್ಟಿ ತೆರೆಯಲಾಗಿದೆ. ಸರ್ಕಾರ ಇದಕ್ಕೆ ಸೂಕ್ತ ಕಾರಣ ಕೊಡಬೇಕು ಎಂದು ಒತ್ತಾಯಿಸಿದ್ದಾರೆ.
2013ರಿಂದ 2023ರ ವರೆಗೆ ಪುನೀತ್ ಕೆರೆಹಳ್ಳಿ ವಿರುದ್ಧ ಸಮಾಜ ವಿರೋಧಿ ಚಟುವಟಿಕೆಯಲ್ಲಿ ಪದೇ ಪದೇ ಭಾಗಿಯಾಗಿರುವ ಆರೋಪದಲ್ಲಿ ಕ್ರಿಮಿನಲ್ ಪ್ರಕರಣಗಳಿದ್ದವು. ಈ ಹಿನ್ನೆಲೆಯಲ್ಲಿ ಗೂಂಡಾ ಕಾಯ್ದೆಯಡಿ ಸಿಸಿಬಿ ಪೊಲೀಸರು ಕೇಸು ದಾಖಲಿಸಿದ್ದರು. ಇದೀಗ ಉಪವಾಸದಿಂದ ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆಯಲ್ಲಿ ಅವರನ್ನು ಪೊಲೀಸರು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಅನ್ನ, ನೀರು ಸೇವಿಸುವುದಿಲ್ಲ ಎಂದು ಪಟ್ಟು ಹಿಡಿದಿರುವ ಪುನೀತ್ ಕೆರೆಹಳ್ಳಿ, “ನನ್ನ ಪ್ರಾಣ ಹೋಗಲಿ, ಸರ್ಕಾರ ಸ್ಪಷ್ಟೀಕರಣ ನೀಡುವವರೆಗೆ ಹಾಗೆ ಇರುತ್ತೇನೆ” ಎಂದಿದ್ದಾರೆ. ಯಾವುದೇ ವೈದ್ಯಕೀಯ ಚಿಕಿತ್ಸೆ ಪಡೆಯದೇ ಹಠ ಮಾಡುತ್ತಿರುವ ಅವರ ವಿರುದ್ಧ ಆತ್ಮಹತ್ಯೆ ಯತ್ನದ ಆರೋಪದಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
The post Punith Kerehalli; ಪುನೀತ್ ಕೆರೆಹಳ್ಳಿ ವಿರುದ್ಧ ದಾಖಲಾಯ್ತು ಮತ್ತೊಂದು FIR – ಕಾರಣ ಇಲ್ಲಿದೆ appeared first on Ain Live News.