ಬೆಂಗಳೂರು: ವಿದ್ಯತ್ ತಂತಿ ತುಳಿದು ತಾಯಿ ಮಗು ಸಾವನ್ನಪ್ಪಿದ ಪ್ರಕರಣಕ್ಕೆ ಕಾರಣ ಇಲಿ ವೈರ್ಗಳನ್ನು ಕಚ್ಚಿದೆ ಎಂಬುದು ಪ್ರಾಥಮಿಕ ತನಿಖೆಯಿಂದ ಗೊತ್ತಾಗಿದೆ ಎಂದು ಸಚಿವ ಕೆ ಜೆ ಜಾರ್ಜ್ ಹೇಳಿರುವುದಕ್ಕೆ ಪ್ರತಿಪಕ್ಷದ ನಾಯಕ ಆರ್. ಅಶೋಕ್ ಕಿಡಿಕಾರಿದ್ದಾರೆ.
PSI Re- Examination: ಡಿಸೆಂಬರ್ 23ರಂದು 545 ಪಿಎಸ್ಐ ಹುದ್ದೆಗಳಿಗೆ ಮರುಪರೀಕ್ಷೆ!
ಈ ಕುರಿತು ಇಂದು ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು, ವೈರ್ಗಳಿಗೆ ಇಲಿ ಕಚ್ಚಿ ಘಟನೆ ಸಂಭವಿಸಿದೆ ಎಂಬ ನೆಪ ಹೇಳಿಕೊಂಡು ತಿಪ್ಪೆ ಸಾರಿಸುವ ಮಟ್ಟಕ್ಕೆ ಸಚಿವರು ಇಳಿದಿರುವುದು ನೀಚತನದ ಪರಮಾವಧಿ ವ್ಯವಸ್ಥೆಯ ಸಮರ್ಪಕ ನಿರ್ವಹಣೆ ಕೊರತೆಯೇ ದುರಂತಕ್ಕೆ ಕಾರಣ ಎಂಬುದು ಮೇಲ್ನೋಟಕ್ಕೆ ಕಂಡು ಬರುತ್ತಿದೆ.
ಆದರೂ, ಹೊಣೆಗಾರಿಕೆಯಿಂದ ನುಣುಚಿಕೊಂಡು ಸಂವೇದನಾ ರಹಿತರಾಗಿ ಸಚಿವ ಜಾರ್ಜ್ ವರ್ತಿಸುತ್ತಿರುವುದು ಸರ್ಕಾರಕ್ಕೆ ಶೋಭೆ ತರುವುದಿಲ್ಲ ಎಂದರು.
ಸಚಿವ ಕೆ ಜೆ ಜಾರ್ಜ್ ರಾಜೀನಾಮೆ ನೀಡಬೇಕು
ನಗರದಲ್ಲಿ ಇತ್ತೀಚೆಗೆ ವಿದ್ಯುತ್ ಅವಘಡದಲ್ಲಿ ತಾಯಿ, ಮಗು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಬೂಬುಗಳನ್ನು ಹೇಳುವುದನ್ನು ಬಿಟ್ಟು ನೈತಿಕ ಹೊಣೆ ಹೊತ್ತು ಇಂಧನ ಸಚಿವ ಕೆ ಜೆ ಜಾರ್ಜ್ ರಾಜೀನಾಮೆ ನೀಡಬೇಕು ಎಂದು ಪ್ರತಿಪಕ್ಷದ ನಾಯಕ ಆರ್. ಅಶೋಕ್ ಆಗ್ರಹಿಸಿದ್ದಾರೆ.
The post R̤ Ashok: ಬೆಸ್ಕಾಂ ನಿರ್ಲಕ್ಷ್ಯಕ್ಕೆ ತಾಯಿ ಮಗಳು ಸಾವು: ಸಚಿವ ಜಾರ್ಜ್ ರಾಜೀನಾಮೆ ನೀಡಲಿ: ಆರ್. ಅಶೋಕ್! appeared first on Ain Live News.