Home ರಾಜಕೀಯ ನಾಳೆ, ಶುಕ್ರವಾರ ಬೆಂಗಳೂರಿನ ಸಿವಿಲ್ ಕೋರ್ಟ್‍ಗೆ ಹಾಜರಾಗಲಿರುವ ರಾಹುಲ್ ಗಾಂಧಿ

ನಾಳೆ, ಶುಕ್ರವಾರ ಬೆಂಗಳೂರಿನ ಸಿವಿಲ್ ಕೋರ್ಟ್‍ಗೆ ಹಾಜರಾಗಲಿರುವ ರಾಹುಲ್ ಗಾಂಧಿ

43
0

ಬೆಂಗಳೂರು : ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಕೆಪಿಸಿಸಿ ವತಿಯಿಂದ ಬಿಜೆಪಿ ವಿರುದ್ಧ ನೀಡಿದ್ದ ಜಾಹೀರಾತಿಗೆ ಸಂಬಂಧಿಸಿದಂತೆ ದಾಖಲಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಎಐಸಿಸಿ ಮುಖಂಡ ರಾಹುಲ್ ಗಾಂಧಿ ನಾಳೆ (ಶುಕ್ರವಾರ) ಬೆಳಗ್ಗೆ 10.30ಕ್ಕೆ ನಗರದ ಕಾವೇರಿ ಭವನದ ಹಿಂಭಾಗದಲ್ಲಿರುವ ಸಿಟಿ ಸಿವಿಲ್ ನ್ಯಾಯಾಲಯಕ್ಕೆ ಹಾಜರಾಗಲಿದ್ದಾರೆ.

ಅನಂತರ, 11.30ಕ್ಕೆ ಕ್ವೀನ್ಸ್‍ರಸ್ತೆಯಲ್ಲಿರುವ ಭಾರತ್ ಜೋಡೋ ಭವನದಲ್ಲಿ ಲೋಕಸಭೆ ಚುನಾವಣೆಯಲ್ಲಿ ಕರ್ನಾಟಕದ ವಿಜೇತ ಹಾಗೂ ಪರಾಜಿತ ಅಭ್ಯರ್ಥಿಗಳ ಜತೆ ಸಭೆ ನಡೆಸಲಿದ್ದಾರೆ. ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಉಪಸ್ಥಿತರಿರುವರು ಎಂದು ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here