ಬೆಂಗಳೂರು:
ಕರ್ನಾಟಕದಿಂದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ನಟ, ರಾಜಕಾರಣಿ ಜಗ್ಗೇಶ್ಗೆ ಬಿಜೆಪಿ ರಾಜ್ಯಸಭೆ ಟಿಕೆಟ್ ಘೋಷಣೆ ಮಾಡಿದೆ.
ರಾಜ್ಯ ವಿಧಾನಸಭೆಯಿಂದ ರಾಜ್ಯಸಭೆಗೆ ನಡೆಯಲಿರುವ ಚುನಾವಣೆಗೆ ಬಿಜೆಪಿಯು ಅಂತಿಮವಾಗಿ ಟಿಕೆಟ್ ಘೋಷಣೆ ಮಾಡಿದೆ. ಪಕ್ಷದ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ಟಿಕೆಟ್ ನೀಡಿರುವ ಆದೇಶ ಹೊರಡಿಸಿದ್ದಾರೆ.
भारतीय जनता पार्टी की केंद्रीय चुनाव समिति ने विभिन्न राज्यों में होने वाले आगामी राज्य सभा द्विवार्षिक चुनाव 2022 के लिए निम्नलिखित नामों पर अपनी स्वीकृति प्रदान की है। pic.twitter.com/LUBrhkXGHN
— BJP (@BJP4India) May 29, 2022
ವಿವಿಧ ರಾಜ್ಯಗಳಿಂದ ಖಾಲಿ ಆಗಲಿರುವ ಒಟ್ಟು 16 ಸ್ಥಾನಗಳಿಗೆ ಟಿಕೆಟ್ ಘೋಷಿಸಲಾಗಿದ್ದು, ಕೇಂದ್ರದ ವಾಣಿಜ್ಯ ಸಚಿವ ಪೀಯೂಷ್ ಗೋಯಲ್ ಅವರನ್ನು ಮಹಾರಾಷ್ಟ್ರದಿಂದ ಕಣಕ್ಕಿಳಿಸಲು ಪಕ್ಷ ನಿರ್ಧರಿಸಿದೆ. ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಮತ್ತೊಮ್ಮೆ ಅವಕಾಶ ನೀಡಲಾಗಿದೆ. ಒಕ್ಕಲಿಗ ಸಮುದಾಯವನ್ನು ಪರಿಗಣಿಸಿ ಜಗ್ಗೇಶ್ಗೆ ಟಿಕೆಟ್ ನೀಡಲಾಗಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.