
ಕಾಂಗ್ರೆಸ್ ರಾಷ್ಟ್ರೀಯ ನಾಯಕರಾದ @RahulGandhi ಅವರು ಬೆಳಗಾವಿಯ ರಾಮದುರ್ಗದಲ್ಲಿ ಕಬ್ಬು ಬೆಳೆಗಾರರೊಂದಿಗೆ ಸಂವಾದ ನಡೆಸಿ ಭ್ರಷ್ಟ ಬಿಜೆಪಿ ಸರ್ಕಾರದ ದುರಾಡಳಿತದಿಂದ ಅವರು ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಚರ್ಚಸಿ, ಕಾಂಗ್ರೆಸ್ ಪಕ್ಷ ಎಂದಿಗೂ ರೈತರ ಬೆನ್ನಿಗೆ ನಿಲ್ಲಲಿದೆ ಎಂಬ ಭರವಸೆ ನೀಡಿದರು.#CongressBaralidePragatiTaralide pic.twitter.com/6E93Qpmywz
— Karnataka Congress (@INCKarnataka) April 24, 2023
ಬೆಂಗಳೂರು:
ಸೆಕ್ಸ್ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ತೀವ್ರ ವಿರೋಧ ಎದುರಿಸುತ್ತಿದ್ದ ರಮೇಶ್ ಜಾರಕಿಹೊಳಿ ಅವರು ಕೊನೆಗೂ ತಮ್ಮ ಸಚಿವ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ.
ಜಾರಕಿಹೊಳಿ ಸೆಕ್ಸ್ ಸಿಡಿ ಬಯಲು ವಿಚಾರಕ್ಕೆ ಸಂಬಂಧಿಸಿದಂತೆ ರಮೇಶ್ ಜಾರಕಿಹೊಳಿ ವಿರುದ್ಧ ತೀವ್ರ ಟೀಕಾ ಪ್ರಹಾರ ನಡೆಸಿದ್ದ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಮಾನ ಮರ್ಯಾದೆ ಇದ್ದರೆ ರಾಜಿನಾಮೆ ನೀಡಿ ಎಂದು ಹೇಳಿದ್ದರು. ಇದೇ ವಿಚಾರವಾಗಿ ನೇರವಾಗಿಯೇ ಬಿಜೆಪಿ ವಿರುದ್ಧ ಟೀಕೆ ಮಾಡಿದ್ದ ಕುಮಾರಸ್ವಾಮಿ ಅವರು ಅಧಿವೇಶನಕ್ಕೂ ಮುನ್ನವೇ ರಮೇಶ್ ಅವರು ರಾಜಿನಾಮೆ ನೀಡಿದರೆ ಒಳಿತು.. ಇಲ್ಲವಾದಲ್ಲಿ ಅಧಿವೇಶನದಲ್ಲಿ ಈ ಬಗ್ಗೆ ನಾವೇ ವಿಚಾರ ಪ್ರಸ್ತಾಪಿಸುತ್ತೇವೆ ಎಂದು ಎಚ್ಚರಿಕೆ ನೀಡಿದ್ದರು. ಈ ಎಲ್ಲ ಬೆಳವಣಿಗೆ ನಡುವೆ ಜಾರಕಿಹೊಳಿ ರಾಜಿನಾಮೆ ನೀಡಿದ್ದಾರೆ ಎಂದು ಎನ್ನಲಾಗಿದೆ.

ರಮೇಶ್ ಜಾರಕಿಹೊಳಿ ರಾಜಿನಾಮೆ ಪತ್ರ ಸಿಎಂ ಬಿಎಸ್ ಯಡಿಯೂರಪ್ಪ ಅವರಿಗೆ ರವಾನಿಸಿದರು. ಈ ಪ್ರಕರಣದ ಕುರಿತು ಕೂಲಂಕುಷ ತನಿಖೆಯಾಗಬೇಕಿದ್ದು, ತನಿಖೆ ಬಳಿಕ ನಾನು ನಿರ್ದೋಷಿ ಎಂದು ಬಹಿರಂಗವಾದ ಬಳಿಕ ಮತ್ತೆ ನನ್ನ ಸ್ಥಾನ ಪಡೆಯುತ್ತೇನೆ ಎಂದು ಹೇಳಿದ್ದಾರೆ ಎಂದು ಎನ್ನಲಾಗಿದೆ.
ಇದನ್ನು ಓದು: ರಮೇಶ್ ಜಾರಕಿಹೊಳಿ ‘ಸಿಡಿ’ ರಾಸಲೀಲೆ; ಹಸಿಬಿಸಿ ದೃಶ್ಯ ರಿಲೀಸ್ https://kannada.thebengalurulive.com/ramesh-jarkihollis-rasleela-cd-released-to-tv-houses/
ಇದನ್ನು ಓದು: ನಾನು ಭಾಗಿಯಾಗಿದ್ದರೆ (ಸೆಕ್ಸ್ ಟೇಪ್ನಲ್ಲಿ) ನನ್ನನ್ನು ಗಲ್ಲು ಮೇಲೆ ಇರಿಸಿ: ರಮೇಶ್ ಜಾರಕಿಹೊಳಿ https://kannada.thebengalurulive.com/put-me-on-the-gallows-if-im-involved-in-a-sex-tape-ramesh-jarkiholi/