Home ಕರ್ನಾಟಕ Bengaluru: ರಾಮೇಶ್ವರಂ ಕೆಫೆ ಸ್ಫೋಟ ಕೇಸ್‌; ವದಂತಿ ಹಬ್ಬಿಸಬೇಡಿ ಎಂದ ಎನ್ಐಎ

Bengaluru: ರಾಮೇಶ್ವರಂ ಕೆಫೆ ಸ್ಫೋಟ ಕೇಸ್‌; ವದಂತಿ ಹಬ್ಬಿಸಬೇಡಿ ಎಂದ ಎನ್ಐಎ

49
0
Rameshwaram Cafe Blast

ಬೆಂಗಳೂರು: ರಾಜಧಾನಿ ಬೆಂಗಳೂರಿನ ರಾಮೇಶ್ವರ ಕೆಫೆ ಬಾಂಬ್ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್ಐಎನಿಂದ ಮಾಧ್ಯಮ ಪ್ರಕಟಣೆ ಹೊರಡಿಸಲಾಗಿದೆ.

ಎನ್ಐಎ ಈಗಾಗಲೇ ಶಂಕಿತರಿಬ್ಬರ ಫೋಟೋ ಪ್ರಕಟಿಸಿ ಸುಳಿವು ನೀಡಿದವರಿಗೆ ತಲಾ 10 ಲಕ್ಷ ರೂಪಾಯಿ ಬಹುಮಾನ ಘೋಷಿಸಿದೆ. ಈ ಪ್ರಕರಣ ಸಂಬಂಧ ಇಂದು ಎನ್‌ಐಎ ಅಧಿಕಾರಿಗಳು ಸಾಕ್ಷಿಯಾಗಿ ಬಿಜೆಪಿ ಕಾರ್ಯಕರ್ತ ಸಾಯಿ ಪ್ರಸಾದ್‌ನನ್ನು ವಿಚಾರಣೆ ನಡೆಸಿದೆ. ಆದರೆ ಕಾಂಗ್ರೆಸ್,ಕೈ ನಾಯಕರು, ಕೆಲ ಮಾಧ್ಯಮಗಳು ರಾಮೇಶ್ವರಂ ಕೆಫೆ ಸ್ಫೋಟದಲ್ಲಿ ಬಿಜೆಪಿ ಕೈವಾಡ, ಕೇಸರಿ ಭಯೋತ್ಪಾದನೆ, ಭಯೋತ್ಪಾದ ರಾಜಕೀಯ ಪಕ್ಷ, ಭಯೋತ್ಪಾದಕರ ಜೊತೆ ಬಿಜೆಪಿ ಲಿಂಕ್ ಸೇರಿದಂತೆ ಬಗೆ ಬಗೆಯ ಪೋಸ್ಟ್ ಹಾಕಿತ್ತು. ಈ ಸುಳ್ಳು ಸುದ್ದಿಗಳು ಹರಿದಾಡುತ್ತಿದ್ದಂತೆ ರಾಷ್ಟ್ರೀಯ ತನಿಖಾ ದಳ ಸ್ಪಷ್ಟನೆ ನೀಡಿದೆ. ಬಿಜೆಪಿ ಕಾರ್ಯಕರ್ತನ ಬಂಧಿಸಿಲ್ಲ. ಈತ ಆರೋಪಿಯಲ್ಲ, ಸಾಕ್ಷಿಯಾಗಿ ವಿಚಾರಣೆ ನಡೆಸಲಾಗಿದೆ ಎಂದು ಸ್ಪಷ್ಟನೆ ನೀಡಿದೆ.

ತೀರ್ಥಹಳ್ಳಿಯ ಬಿಜೆಪಿ ಕಾರ್ಯಕರ್ತ ಸಾಯಿ ಪ್ರಸಾದ್, ಮೊಬೈಲ್ ಅಂಗಡಿ ಮಾಲೀಕನ ವಿಚಾರಣೆ ನಡೆಸಲಾಗಿದೆ. ಸಾಯಿ ಪ್ರಸಾದ್ ತನ್ನ ಹಳೆ ಮೊಬೈಲನ್ನು ಮೊಬೈಲ್ ಅಂಗಡಿ ಮಾಲೀಕನಿಗೆ ಮಾರಾಟ ಮಾಡಿದ್ದ. ಇದೇ ಮೊಬೈಲನ್ನು ಅಂಗಡಿ ಮಾಲೀಕ ಚಿಕ್ಕಮಗಳೂರಿನ ಮುಝಮ್ಮಿಲ್ ಷರೀಫನಿಗೆ ಮಾರಾಟ ಮಾಡಲಾಗಿತ್ತು. ಈಗಾಗಲೇ ಎನ್ಐಎ ತಲೆಮರೆಸಿಕೊಂಡಿರುವ ಇಬ್ಬರು ಶಂಕಿತರ ಫೋಟೋ ಬಿಡುಗಡೆ ಮಾಡಿದೆ. ಈ ಶಂಕಿತರಿಗೆ ಮುಝಮ್ಮಿಲ್ ಷರೀಪ್ ಮೊಬೈಲ್ ಅಂಗಡಿ ಮಾಲೀಕನಿಂದ ಖರೀದಿಸಿದ ಮೊಬೈಲ್‌ನಿಂದಲೇ ಸಂಪರ್ಕ ಮಾಡಿದ್ದ.

ಹೀಗಾಗಿ ಎನ್‌ಐಎ ಅಧಿಕಾರಿಗಳು ಮುಝಮ್ಮಿಲ್ ಷರೀಫ್ ವಿಚಾರಣೆ ವೇಳೆ ಮೊಬೈಲ್ ಮಾಹಿತಿ ಕಲೆ ಹಾಕಲಾಗಿತ್ತು. ಮೊಬೈಲ್ ಜಾಡು ಹಿಡಿದು ಅಂಗಡಿಗೆ ತೆರಳಿದ ಅಧಿಕಾರಿಗಳು ಮೊಬೈಲ್ ಅಂಗಡಿ ಮಾಲೀಕನ ವಿಚಾರಣೆ ನಡೆಸಿದ್ದಾರೆ. ಈ ವೇಳೆ ಮೊಬೈಲನ್ನು ಸಾಯಿ ಪ್ರಸಾದ್‌ನಿಂದ ಖರೀದಿಸಿದ್ದಾಗಿ ಹೇಳಿದ್ದ. ಹೀಗಾಗಿ ಸಾಯಿ ಪ್ರಸಾದ್‌ನ ವಿಚಾರಣೆ ನಡೆಸಿದ್ದಾರೆ. ಸಾಯಿ ಪ್ರಸಾದ್ ಈ ಸ್ಫೋಟ ಪ್ರಕರಣದ ಸಾಕ್ಷಿಯಾಗಿದ್ದಾರೆ ಹೊರತು ಆರೋಪಿಯಲ್ಲ ಎಂದು ಹೇಳಿದ್ದಾರೆ.

LEAVE A REPLY

Please enter your comment!
Please enter your name here