Home ನವ ದೆಹಲಿ ಖ್ಯಾತ ಉದ್ಯಮಿ ಪದ್ಮವಿಭೂಷಣ ರತನ್‌ ಟಾಟಾ ವಿಧಿವಶ

ಖ್ಯಾತ ಉದ್ಯಮಿ ಪದ್ಮವಿಭೂಷಣ ರತನ್‌ ಟಾಟಾ ವಿಧಿವಶ

17
0

ಮುಂಬೈ/ನವ ದೆಹಲಿ: ದೇಶದ ಅಗ್ರಗಣ್ಯ ಕೈಗಾರಿಕೋದ್ಯಮಿ, ಪದ್ಮವಿಭೂಷಣ ರತನ್ ಟಾಟಾ ನಿಧನ ಹೊಂದಿದ್ದಾರೆ.

86 ವರ್ಷದ ರತನ್, ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಹೀಗಾಗಿ ಮೊನ್ನೆಯಷ್ಟೇ ಮುಂಬೈನಲ್ಲಿ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಮತ್ತೆ ಅವರ ಅನಾರೋಗ್ಯ ಉಲ್ಬಣಿಸಿದಾಗ ಆಸ್ಪತ್ರೆಗೆ ಸೇರಿಸಲಾಗಿತ್ತು. ಬುಧವಾರ ರಾತ್ರಿ ರತನ್ ಟಾಟಾ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

ಶ್ರೀಮತಿ ಸೂನಿ ಮತ್ತು ನಾವಲ್ ಹರ್ಮುಸ್ ಜಿ ಟಾಟಾ ದಂಪತಿಯ ಹಿರಿಯ ಮಗನಾಗಿ ರತನ್ ಟಾಟಾ ಬೊಂಬಾಯಿನಲ್ಲಿ 1937ರಲ್ಲಿ ಜನಿಸಿದರು. ರತನ್ ಟಾಟಾ ಅವರಿಗೆ ಭಾರತ ಸರ್ಕಾರವು 2008 ರಲ್ಲಿ ದೇಶದ ಎರಡನೇ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಪದ್ಮವಿಭೂಷಣವನ್ನು ನೀಡಿ ಗೌರವಿಸಿತು. ಅವಿವಾಹಿತ ರತನ್ ಟಾಟಾ ಅವರು ಅಪರೂಪದ ಉದ್ಯಮಿಯಾಗಿ ಬೆಳೆದು ದೇಶದ ಕೈಗಾರಿಕಾ ಕ್ಷೇತ್ರದಲ್ಲಿ ದಂತಕತೆಯಾಗಿದ್ದರು. ದೇಶದ ಆಸ್ತಿಯಾಗಿದ್ದ ರತನ್ ಟಾಟಾ ಅವರು ತಮ್ಮ ಗಳಿಕೆಯನ್ನೆಲ್ಲಾ ದಾನಧರ್ಮಗಳಲ್ಲಿ ವಿನಿಯೋಗಿಸಿದ್ದಾರೆ.

ಕೈಗಾರಿಕೋದ್ಯಮಿ ರತನ್ ಟಾಟಾ ವಿಧಿವಶರಾದ ಸುದ್ದಿ ಕೇಳಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ತಮ್ಮ ಎಕ್ಸ್​ ಖಾತೆಯಲ್ಲಿ ಟ್ವೀಟ್​ ಮಾಡಿ, ಹಿರಿಯ ಚೇತನಕ್ಕೆ ಅಶೃತರ್ಪಣ ಸಲ್ಲಿಸಿದ್ದಾರೆ:

LEAVE A REPLY

Please enter your comment!
Please enter your name here