ಬೆಂಗಳೂರು:
ಹುತಾತ್ಮ ರ ದಿನಾಚರಣೆಯ ಅಂಗವಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಮಹಾತ್ಮಾ ಗಾಂಧೀಜಿಯವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಪುಷ್ಪನಮನ ಸಲ್ಲಿಸಿ, ಹುತಾತ್ಮರ ಸ್ಮರಣಾರ್ಥ 2 ನಿಮಿಷಗಳ ಮೌನಾಚಾರಣೆ ಮಾಡಿದರು.

ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ, ಶಾಸಕ ರಾಜ್ ಕುಮಾರ್ ತೇಲ್ಕೂರ್, ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್ ಮೊದಲಾದವರು ಉಪಸ್ಥಿತರಿದ್ದರು.
ಇದನ್ನೂ ಓದಿ: ಸರ್ವೋದಯ ದಿನಾಚರಣೆ ಅಂಗವಾಗಿ ಗಾಂಧೀಜಿರವರ ಪ್ರತಿಮೆಗೆ ಗೌರವ ಸಮರ್ಪಣೆ