ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಿರ್ಮಾಪಕ ಕೆ. ಪ್ರಭಾಕರ್ ನಿಧನ ಹೊಂದಿದ್ದಾರೆ.
ಹೃದಯಾಘಾತ ಆದ ಬಳಿಕ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿ ಆಗದೇ ಅವರು ಇಹಲೋಕ ತ್ಯಜಿಸಿದ್ದಾರೆ. ಕೆ. ಪ್ರಭಾಕರ್ ಅವರ ನಿಧನಕ್ಕೆ ಕನ್ನಡ ಚಿತ್ರರಂಗದ ಸೆಲೆಬ್ರಿಟಿಗಳು ಕಂಬನಿ ಮಿಡಿದಿದ್ದಾರೆ. ಹಿರಿಯ ನಿರ್ಮಾಪಕನ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಎಲ್ಲರೂ ಪ್ರಾರ್ಥಿಸಿದ್ದಾರೆ.
ಸ್ಯಾಂಡಲ್ವುಡ್ನಲ್ಲಿ ಸಭ್ಯ ನಿರ್ಮಾಪಕ ಎಂದು ಕೆ. ಪ್ರಭಾಕರ್ ಅವರು ಗುರುತಿಸಿಕೊಂಡಿದ್ದಾರೆ. ಅನೇಕ ಸ್ಟಾರ್ ಕಲಾವಿದರ ಜೊತೆ ಅವರು ಸಿನಿಮಾ ಮಾಡಿದ್ದರು ಎನ್ನಲಾಗಿದೆ.
ಕಾಶಿನಾಥ್, ಶಿವರಾಜ್ಕುಮಾರ್, ವಿಷ್ಣುವರ್ಧನ್, ಉಪೇಂದ್ರ, ರಾಧಿಕಾ ಕುಮಾರಸ್ವಾಮಿ ಮುಂತಾದ ಕಲಾವಿದರ ಸಿನಿಮಾಗಳಿಗೆ ಕೆ. ಪ್ರಭಾಕರ್ ಅವರು ಬಂಡವಾಳ ಹೂಡಿದ್ದರು. ಹಲವು ಸಿನಿಮಾಗಳ ಮೂಲಕ ಅವರು ಹೆಸರು ಗಳಿಸಿದ್ದರು.