ಬೆಂಗಳೂರು;– ಬಿಜೆಪಿ ನಾಯಕರು ಕೇಂದ್ರದಿಂದ ಬರ ಪರಿಹಾರ ಕೊಡಿಸಲಿ ಎಂದು ಡಿಕೆ ಶಿವಕುಮಾರ್ ಆಗ್ರಹಿಸಿದ್ದಾರೆ.
ಈ ಸಂಬಂಧ ಮಾತನಾಡಿದ ಅವರು, ಬಿಜೆಪಿ ನಾಯಕರು ರಾಜ್ಯದ ಬರ ಪರಿಸ್ಥಿತಿ ಅಧ್ಯಯನ ಮಾಡಿದರೆ ತಪ್ಪೇನೂ ಇಲ್ಲ. ಕೇಂದ್ರ ಬರ ಅಧ್ಯಯನ ತಂಡ ಇಲ್ಲಿ ಪರಿಸ್ಥಿತಿ ಅಧ್ಯಯನ ಮಾಡಿದೆ, ಆದರೂ ಯಾವುದೇ ನೆರವು ಬಂದಿಲ್ಲ. ಈಗ ಬಿಜೆಪಿ ನಾಯಕರು ಬರ ಅಧ್ಯಯನ ಮಾಡಿ ಕೇಂದ್ರದಿಂದ ಪರಿಹಾರ ಕೊಡಿಸಲಿ ಎಂದರು.
ಕರ್ನಾಟಕ ಸರ್ಕಾರ, ಕೇಂದ್ರದ ಬರ ಪರಿಸ್ಥಿತಿ ನಿಯಮಗಳ ಅನುಸಾರ ರಾಜ್ಯದಲ್ಲಿ 200ಕ್ಕೂ ಹೆಚ್ಚು ತಾಲೂಕುಗಳನ್ನು ಬರ ಪೀಡಿತ ಎಂದು ಘೋಷಣೆ ಮಾಡಿದೆ. ಹೀಗಾಗಿ ಕೇಂದ್ರ ಸರ್ಕಾರ ಬರ ಪರಿಹಾರ ನೀಡುವಲ್ಲಿ ಉಪಕಾರ ಮನಸ್ಥಿತಿ ಪ್ರದರ್ಶಿಸಲಿ. ಕಂದಾಯ ಸಚಿವರು ಹಾಗೂ ಕೃಷಿ ಸಚಿವರು ಕೇಂದ್ರಕ್ಕೆ ಸಲ್ಲಿಸಿರುವ ಮನವಿಗೆ ತಕ್ಕಂತೆ ಪರಿಹಾರ ನೀಡಲಿ ಎಂದು ಆಗ್ರಹಿಸಿದರು.
ಕೇಂದ್ರದ ಬರ ಅದ್ಯಯನ ತಂಡ ಅಧ್ಯಯನ ಮಾಡಿದರೂ ಯಾವುದೇ ಸ್ಪಂದನೆ ಬಂದಿಲ್ಲವಲ್ಲ ಎಂದು ಕೇಳಿದಾಗ, ಆ ಕಾರಣಕ್ಕೆ ರಾಜ್ಯ ಬಿಜೆಪಿ ನಾಯಕರು ಕೂಡ ರಾಜ್ಯ ಪ್ರವಾಸ ಮಾಡಿ ಬರ ಅಧ್ಯಯನ ಮಾಡಲಿ. ನಂತರ ಅವರು ಕೇಂದ್ರ ಸರ್ಕಾರಕ್ಕೆ ತಮ್ಮ ವರದಿ ನೀಡಿ, ರಾಜ್ಯಕ್ಕೆ ಸೂಕ್ತ ಪರಿಹಾರ ಮೊತ್ತ ಕೊಡಿಸಲಿ ಎಂದು ಛೇಡಿಸಿದರು.
The post Shivakumar: ಬರದ ಸ್ಥಿತಿ ಅಧ್ಯಯದ ಮಾಡಿದರೂ ರಾಜ್ಯಕ್ಕೆ ಪರಿಹಾರ ಕೊಡದ ಕೇಂದ್ರ – DCM ಡಿಕೆಶಿ appeared first on Ain Live News.