ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲ್ಲೂಕಿನ ಹೊಸಮನೆ ಪ್ರದೇಶದಲ್ಲಿ ನಿನ್ನೆ ಯುವಕನೊಬ್ಬನಿಗೆ ಮಾರಕಾಸ್ತ್ರದಿಂದ ಇರಿಯಲಾಗಿದೆ. ಘಟನೆಯ ಸಂಬಂಧ ಎಸ್ಪಿ ಮಿಥುನ್ ಕುಮಾರ್ ವಾಟ್ಸ್ಯಾಪ್ ಮೆಸೇಜ್ ರವಾನೆ ಮಾಡಿದ್ದು, ಪ್ರಕರಣ ಸಂಬಂಧ 9 ಮಂದಿಯನ್ನು ವಶಕ್ಕೆ ಪಡೆಯಲಾಗಿದೆ ಎಂದು ತಿಳಿಸಿದ್ದಾರೆ
ಏನಿದು ಘಟನೆ
ಭದ್ರಾವತಿಯ ಹೊಸಮನೆಯ ಹನುಮಂತನಗರದಲ್ಲಿ ಗಾರೆ ಕೆಲಸ ಮಾಡುವ ಯುವಕ ನಂದಾ ಎಂಬಾತ ತನ್ನ ಮೊಬೈಲ್ವೊಂದನ್ನ ಅಡವಿಟ್ಟಿದನಂತೆ. ಅದನ್ನು ಬಿಡಿಸಿಕೊಳ್ಳಲು ಹೋಗಿದ್ದ ಸಂದರ್ಭದಲ್ಲಿ , ಅಡವಿಟ್ಟುಕೊಂಡಿದ್ದವರು ಮೊಬೈಲ್ ಕೊಡಲು ನಿರಾಕರಿಸಿದ್ದಾರೆ. ಈ ಸಂಬಂಧ ನಂದಾ ಪೊಲೀಸರಿಗೆ ದೂರು ಕೊಡಲು ಮುಂದಾಗಿದ್ದಾನೆ. ಇದೇ ವಿಚಾರಕ್ಕೆ ಮೊಬೈಲ್ ಅಡವಿಟ್ಟುಕೊಂಡವರು ಜಗಳ ತೆಗೆದು ನಂದಾನಿಗೆ ಮಾರಕಾಸ್ತ್ರದಿಂದ ಇರಿದಿದ್ದಾರೆ ಎಂದು ತಿಳಿದು ಬಂದಿದೆ.
Home remedies: ಚಳಿಗಾಲದಲ್ಲಿ ಕಿವಿ ನೋವು ನಿವಾರಿಸಲು ಇಲ್ಲಿದೆ ಮನೆಮದ್ದು!
ಈ ಬಗ್ಗೆ ವಾಟ್ಸ್ಯಾಪ್ ಮೆಸೇಜ್ನಲ್ಲಿ ಮಾಹಿತಿ ನೀಡಿರುವ ಎಸ್ಪಿ ಮಿಥುನ್ ಕುಮಾರ್, ನಿನ್ನೆ ರಾತ್ರಿ ಭದ್ರಾವತಿಯಲ್ಲಿ ಯುವಕನೊಬ್ಬನಿಗೆ ಚೂಪಾದ ವಸ್ತುವಿನಿಂದ ಇರಿಯಲಾಗಿದ್ದು, ಮೈನರ್ ಇಂಜುರಿಯಾಗಿದೆ. ಪ್ರಕರಣ ಸಂಬಂಧ ಒಂಬತ್ತು ಮಂದಿಯನ್ನು ವಶಕ್ಕೆ ಪಡೆಯಲಾಗಿದೆ. ಮೊಬೈಲ್ ಫೋನ್ ಅಡವಿಟ್ಟಿರುವ ವಿಚಾರದಲ್ಲಿ ಹಾಗೂ ವೈಯಕ್ತಿಕ ಕಾರಣಕ್ಕೆ ಈ ಘಟನೆ ನಡೆದಿದ್ದು, ಇದರಲ್ಲಿ ಯಾವುದೇ ಕೋಮು ವಿಚಾರ ಇರುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
The post Shivamoga: ಮೊಬೈಲ್ ವಿಚಾರಕ್ಕೆ ಯುವಕನಿಗೆ ಚೂರಿ ಇರಿತ: 9 ಮಂದಿ ವಶಕ್ಕೆ appeared first on Ain Live News.