ಬೆಂಗಳೂರು:
ಗಂಟಲು ನೋವುನ ಸಮಸ್ಯೆ ಹಿನ್ನೆಲೆ ವಿಶ್ರಾಂತಿಗಾಗಿ ಸಿಎಂ ಸಿದ್ದರಾಮಯ್ಯ ವಿಧಾನಸೌಧದಿಂದ ಕಾವೇರಿ ನಿವಾಸಕ್ಕೆ ತೆರಳಿದ್ದಾರೆ.
ರಾಜ್ಯ ಬಜೆಟ್ ಅನ್ನು 3 ಗಂಟೆ 15 ನಿಮಿಷ ಸುದೀರ್ಘ ಬಜೆಟ್ ಭಾಷಣ ಮತ್ತು 2 ದಿನ ನಿರಂತರ ಜಿಲ್ಲಾ ಪ್ರವಾಸಗಳಲ್ಲಿ ಭಾಷಣ ಮಾಡಿರುವ ಹಿನ್ನೆಲೆ ಸಿದ್ದರಾಮಯ್ಯನವರಿಗೆ ಗಂಟಲು ನೋವುನ ಸಮಸ್ಯೆ ಎದುರಾಗಿದೆ. ಹೀಗಾಗಿ ವಿಶ್ರಾಂತಿಯ ಅವಶ್ಯಕತೆ ಇದ್ದು ವಿಧಾನಸೌಧದಿಂದ ಕಾವೇರಿ ನಿವಾಸಕ್ಕೆ ತೆರಳಿದ್ದಾರೆ.
ಸಿಎಂ ಅವರ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ, ಐಎಎಸ್ ಅಧಿಕಾರಿ ಎಲ್.ಕೆ.ಅತೀಕ್ ಅವರು ಬೆಂಗಳೂರುಲೈವ್ಗೆ ಈ ವಿಷಯವನ್ನು ಖಚಿತಪಡಿಸಿದ್ದಾರೆ, ಸಿಎಂಗೆ ಗಂಟಲು ನೋಯುತ್ತಿದೆ ಮತ್ತು ಅವರು ಈಗ ಚೆನ್ನಾಗಿದ್ದರೆ, ಎಂದು ಅವರು ಹೇಳಿದರು.