Home ಅಪರಾಧ ಸಿಡಿ ಪ್ರಕರಣ; ರಮೇಶ್ ಜಾರಕಿಹೊಳಿಯ ವಿಚಾರಣೆ ನಡೆಸಿದ ಎಸ್​ಐಟಿ

ಸಿಡಿ ಪ್ರಕರಣ; ರಮೇಶ್ ಜಾರಕಿಹೊಳಿಯ ವಿಚಾರಣೆ ನಡೆಸಿದ ಎಸ್​ಐಟಿ

27
0

ಬೆಂಗಳೂರು:

ಮಾಜಿ ಸಚಿವ ರಮೇಶ್ ಜಾರಕಿಹೊಳಿ‌ ರಾಸಲೀಲೆ‌ ಕುರಿತಾದ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ರಮೇಶ್ ಜಾರಕಿಹೊಳಿ ಅವರನ್ನು ವಿಶೇಷ ತನಿಖಾ ತಂಡ(ಎಸ್‍ಐಟಿ) ಅಧಿಕಾರಿಗಳು ಸೋಮವಾರ 2 ಗಂಟೆಗಳ ಕಾಲ ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ.

ಸೋಮವಾರ ತಡರಾತ್ರಿ ಸದಾಶಿವನಗರದಲ್ಲಿರುವ ರಮೇಶ್ ಜಾರಕಿಹೊಳಿ ಅವರ ನಿವಾಸಕ್ಕೆ ತೆರಳಿ ವಿಚಾರಣೆಗೆ ನಡೆಸಿದ್ದು, ಎಸ್‍ಐಟಿ ಪೊಲೀಸರ ಎದುರು 4 ಪುಟಗಳ ಹೇಳಿಕೆ ದಾಖಲಿಸಿದ್ದಾರೆ‌ ಎನ್ನಲಾಗಿದೆ.

ಎಸಿಪಿ ಧರ್ಮೆಂದ್ರ ಎದುರು ಜಾರಕಿಹೊಳಿ ಹೇಳಿಕೆ ನೀಡಿದ್ದು, ರಾಜಕೀಯ ಷಡ್ಯಂತ್ರ, ಬ್ಲ್ಯಾಕ್‍ಮೇಲ್ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ ಎನ್ನಲಾಗುತ್ತಿದೆ.

ನನ್ನ ವಿರುದ್ಧ ಕಳೆದ 4 ತಿಂಗಳಿಂದ ಬ್ಲ್ಯಾಕ್‍ಮೇಲ್ ನಡೆಯುತ್ತಿತ್ತು. ನಿನ್ನನ್ನು ರಾಜಕೀಯವಾಗಿ ಅಂತ್ಯಗೊಳಿಸಲಾಗುವುದು ಎಂದು ಧಮ್ಕಿ ಹಾಕಿದ್ದರು. ನನ್ನ ಆಪ್ತನ ಮೂಲಕ ಹಣಕ್ಕಾಗಿ ನನ್ನ ಮೇಲೆ ಒತ್ತಡ ಹಾಕಿದ್ದರು. ಆದರೆ, ನಾನು ಆ ಒತ್ತಡಕ್ಕೆ ಮಣಿದಿರಲಿಲ್ಲ ಎಂದು ಹೇಳಿದ್ದಾರೆ. ಈ ಮೂಲಕ 4 ತಿಂಗಳಿಂದ ನಡೆಯುತ್ತಿದ್ದ ಷಡ್ಯಂತ್ರದ ಬಗ್ಗೆ ಎಸ್‍ಐಟಿಗೆ ಜಾರಕಿಹೊಳಿ ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ.

LEAVE A REPLY

Please enter your comment!
Please enter your name here