ಬೆಂಗಳೂರು : ರಾಜ್ಯ ವಿಧಾನ ಮಂಡಲದ ಮುಂಗಾರು ಅಧಿವೇಶನವನ್ನು ಜು.15ರಿಂದ 26ರವರೆಗೆ ಕರೆಯಲು ರಾಜ್ಯಪಾಲರಿಗೆ ರಾಜ್ಯ ಸರಕಾರ ಶಿಫಾರಸ್ಸು ಮಾಡಿದೆ.
ಜೂ.20ರಂದು ನಡೆದ ಸಚಿವ ಸಂಪುಟದ ಸಭೆಯಲ್ಲಿ ಅಧಿವೇಶನದ ದಿನಾಂಕ ಅಂತಿಮಗೊಳಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಅಧಿಕಾರ ನೀಡಲಾಗಿತ್ತು. ಅದರಂತೆ, ಮುಖ್ಯಮಂತ್ರಿ ಅಧಿವೇಶನದ ದಿನಾಂಕವನ್ನು ಅಂತಿಮಗೊಳಿಸಿದ್ದು, ರಾಜ್ಯಪಾಲರಿಗೆ ಶಿಫಾರಸ್ಸು ಮಾಡಲಾಗಿದೆ.