Home ಆರೋಗ್ಯ ಕೋವಿಡ್ ಗೆ ಕಡಿವಾಣ ಹಾಕಲು ಬಿಗಿ ಕ್ರಮ ಪಾಲನೆ ಮುಖ್ಯ: ಡಿಸಿಎಂ ಸವದಿ

ಕೋವಿಡ್ ಗೆ ಕಡಿವಾಣ ಹಾಕಲು ಬಿಗಿ ಕ್ರಮ ಪಾಲನೆ ಮುಖ್ಯ: ಡಿಸಿಎಂ ಸವದಿ

122
0
Advertisement
bengaluru

ಬೆಂಗಳೂರು:

ಕೋವಿಡ್ 2ನೇ ಅಲೆಗೆ ನಿಯಂತ್ರಣ ಹೇರಿ ಜನರನ್ನು ಸಾವಿನ ದವಡೆಯಿಂದ ಪಾರು ಮಾಡಲು ನಾಳೆ (ಮಂಗಳವಾರ) ರಾತ್ರಿಯಿಂದ ಕಟ್ಟುನಿಟ್ಟಿನ ಕರ್ಫ್ಯೂ ಜಾರಿ ಮಾಡಲಾಗುತ್ತಿರುವುದರಿಂದ ಸಾರ್ವಜನಿಕರು ಮತ್ತು ಸಾರಿಗೆ ವಲಯದಲ್ಲಿ ಕೆಲಸ ಮಾಡುವಂಥವರು ಸಹಕರಿಸಬೇಕೆಂದು ಉಪಮುಖ್ಯಮಂತ್ರಿಗಳು ಮತ್ತು ಸಾರಿಗೆ ಸಚಿವರಾದ ಲಕ್ಷ್ಮಣ ಸವದಿ ಅವರು ಇಂದು ಮನವಿ ಮಾಡಿದ್ದಾರೆ.

ಕರ್ಫ್ಯೂ ವಿಧಿಸುವುದು ನಮ್ಮ ಸರ್ಕಾರಕ್ಕೆ ಸಂತಸದ ವಿಷಯವೇನಲ್ಲ. ಆದರೆ ಈ ಸಂಕಷ್ಟದ ಸಂದರ್ಭದಲ್ಲಿ ಇದು ಅನಿವಾರ್ಯ ಕ್ರಮವಾಗಿದೆ. ಇಲ್ಲದಿದ್ದರೆ ಕೋವಿಡ್ ಕೈಮೀರಿ ಇಡೀ ಸಮುದಾಯಕ್ಕೇ ಅಪಾಯ ತಂದೊಡ್ಡಬಹುದು.

ಆದ್ದರಿಂದ ಜಾರಿಗೆ ಬರಲಿರುವ ಕರ್ಫ್ಯೂ ಯಶಸ್ವಿಯಾಗಲು ವಾಹನಗಳ ಸಂಚಾರ ಮತ್ತು ಜನರ ಓಡಾಟಗಳನ್ನು ಪ್ರತಿಬಂಧಿಸಲಾಗಿದೆ. ಸರ್ಕಾರದ ಈ ಕಟ್ಟುನಿಟ್ಟಿನ ಕ್ರಮವನ್ನು ಉಲ್ಲಂಘಿಸಲು ಯಾರೂ ಮುಂದಾಗಬಾರದು. ಬಾಡಿಗೆ ಆಧಾರದ ಮೇಲೆ ವಾಹನ ಸೇವೆ ಸಲ್ಲಿಸುತ್ತಿರುವ ಖಾಸಗಿಯವರು ಈ ಸೂಕ್ಷ್ಮ ಪರಿಸ್ಥಿತಿಯನ್ನು ಅರ್ಥ ಮಾಡಿಕೊಂಡು ಸರ್ಕಾರದೊಂದಿಗೆ ಕೈ ಜೋಡಿಸಬೇಕು. ಒಂದು ವೇಳೆ ಪರಿಸ್ಥಿತಿಯನ್ನು ದುರ್ಲಾಭ ಮಾಡಿಕೊಂಡು ಹೆಚ್ಚಿನ ಹಣ ಸುಲಿಗೆಗೆ ಮುಂದಾಗಿ ಕಾನೂನು ಉಲ್ಲಂಘಿಸಿದರೆ ಅಂಥವರ ವಿರುದ್ಧ ಬಿಗಿ ಕ್ರಮ ಕೈಗೊಳ್ಳಲಾಗುವುದು ಎಂದು ಶ್ರೀ ಸವದಿ ಅವರು ಎಚ್ಚರಿಕೆ ನೀಡಿದರು.

bengaluru bengaluru

ನಮ್ಮ ಸರ್ಕಾರ ಕೋವಿಡ್ ತಡೆಗಟ್ಟುವ ನಿಟ್ಟಿನಲ್ಲಿ ವ್ಯಾಪಕವಾಗಿ ಉಚಿತ ಲಸಿಕೆ ವ್ಯವಸ್ಥೆಯನ್ನು ಕೈಗೊಳ್ಳುತ್ತಿದೆ. ಇದರ ಸೌಲಭ್ಯವನ್ನು ಪಡೆದುಕೊಂಡು ಮತ್ತು ಸರ್ಕಾರದ ಮಾರ್ಗಸೂಚಿಗಳನ್ನು ಪಾಲಿಸಿ ಕೋವಿಡ್ ಪಿಡುಗನ್ನು ನಿರ್ಮೂಲನ ಮಾಡಲು ನಾವೆಲ್ಲರೂ ಒಂದಾಗಿ ಪ್ರಯತ್ನಿಸೋಣ ಎಂದು ಅವರು ತಿಳಿಸಿದರು.


bengaluru

LEAVE A REPLY

Please enter your comment!
Please enter your name here