Home Uncategorized Sulibele; ಆಯೋಧ್ಯೆಯಲ್ಲಿ ರಾಮ ಮಂದಿನ ನಿರ್ಮಾಣ, ಹೆಮ್ಮೆಯ ವಿಷಯ -ಚಕ್ರವರ್ತಿ ಸೂಲಿಬೆಲೆ

Sulibele; ಆಯೋಧ್ಯೆಯಲ್ಲಿ ರಾಮ ಮಂದಿನ ನಿರ್ಮಾಣ, ಹೆಮ್ಮೆಯ ವಿಷಯ -ಚಕ್ರವರ್ತಿ ಸೂಲಿಬೆಲೆ

20
0

ಚಿಂಚೋಳಿ;- ಆಯೋಧ್ಯೆಯಲ್ಲಿ ರಾಮ ಮಂದಿನ ನಿರ್ಮಾಣಗೊಳ್ಳುತ್ತಿರುವುದು ಹೆಮ್ಮೆಯ ವಿಷಯವಾಗಿದೆ ಎಂದು ಯುವ ಬ್ರಿಗೇಡ್ ಮುಖ್ಯಸ್ಥ ಚಕ್ರವರ್ತಿ ಸೂಲಿಬೆಲೆ ಅಭಿಪ್ರಾಯ ವ್ಯಕ್ತಪಡಿಸಿದರು.

ದೇಶದ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣವು ಅನೇಕ ವರ್ಷಗಳ ನಂತರ ನಡೆಯುತ್ತಿರುವುದು ನಮ್ಮೆಲ್ಲರ ಸೌಭಾಗ್ಯ. ಶೌರ್ಯ ಪ್ರದರ್ಶಿಸಿ ರಾಷ್ಟ್ರ ಮತ್ತು ಧರ್ಮಕ್ಕಾಗಿ ಪ್ರಾಣತ್ಯಾಗ ಮಾಡಿದ ವೀರರ ಸ್ಮರಣೆಗಾಗಿ ವಿಎಚ್‌ಪಿ ಶೌರ್ಯ ಜಾಗರಣ ರಥಯಾತ್ರೆ ಹಮ್ಮಿಕೊಂಡಿದೆ. ದೇಶದ ಸಂಸ್ಕೃತಿ ಮತ್ತು ಪರಂಪರೆ ರಕ್ಷಣೆಗೆ ಪ್ರತಿಯೊಬ್ಬರು ಶ್ರಮಿಸಬೇಕು. ಯುವಕರು ದುಶ್ಚಟಗಳಿಂದ ದೂರ ಇರಬೇಕು.

ರಾಮನ ಜನ್ಮಸ್ಥಳ ಅಯೋಧ್ಯೆ ಅಸಂಖ್ಯಾತ ಹಿಂದುಗಳ ಪವಿತ್ರ ಪುಣ್ಯಭೂಮಿ ಆಗಿದೆ. ಕಾಂಗ್ರೆಸ್‌ ಸರಕಾರ ಅಯೋಧ್ಯೆಯಲ್ಲಿ ರಾಮನ ದೇಗುಲ ನಿರ್ಮಿಸಲು ಎಂದಿಗೂ ಪ್ರಯತ್ನ ಮಾಡಲಿಲ್ಲ. ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರ ಪ್ರಯತ್ನದಿಂದ ಇಂದು ಆಯೋಧ್ಯೆಯಲ್ಲಿ ರಾಮ ಮಂದಿನ ನಿರ್ಮಾಣಗೊಳ್ಳುತ್ತಿರುವುದು ಹೆಮ್ಮೆಯ ವಿಷಯವಾಗಿದೆ ಎಂದರು.

The post Sulibele; ಆಯೋಧ್ಯೆಯಲ್ಲಿ ರಾಮ ಮಂದಿನ ನಿರ್ಮಾಣ, ಹೆಮ್ಮೆಯ ವಿಷಯ -ಚಕ್ರವರ್ತಿ ಸೂಲಿಬೆಲೆ appeared first on Ain Live News.

LEAVE A REPLY

Please enter your comment!
Please enter your name here