ಬೆಂಗಳೂರು:
ಇಂದು ಸಂಜೆ ರಾಜಭವನದಲ್ಲಿ ಆಯೋಜಿಸಲಾಗಿದ್ದ ಭಾರತದ ಗೌರವಾನ್ವಿತ ರಾಷ್ಟ್ರಪತಿಗಳಾದ ಶ್ರೀ ರಾಮನಾಥ್ ಕೋವಿಂದ್ ಮತ್ತು ಪ್ರಥಮ ಮಹಿಳೆ ಸವಿತಾ ಕೋವಿಂದ್, ಅವರೊಂದಿಗಿನ ಚಹಾಕೂಟದಲ್ಲಿ ಘನತೆವೆತ್ತ ರಾಜ್ಯಪಾಲರಾದ ಶ್ರೀ ಥಾವರ್ ಚಂದ್ ಅವರು ಭಾಗಿಯಾಗಿದ್ದರು.
![ರಾಜಭವನದಲ್ಲಿ ರಾಷ್ಟ್ರಪತಿಗಳ ಚಹಕೂಟ, ರಾಜ್ಯಪಾಲರು ಭಾಗಿ 1 Tea Party Hosted for President at Governor House in Bengaluru](https://kannada.thebengalurulive.com/wp-content/uploads/2021/10/Tea-Party-Hosted-for-President-at-Governor-House-in-Bengaluru-1.jpg)
ಚಹಾಕೂಟದಲ್ಲಿ ಭಾಗವಹಿಸಿದ ನ್ಯಾಯಾಧೀಶರು ಮತ್ತು ಅವರ ಕುಟುಂಬದವರೊಂದಿಗೆ ರಾಷ್ಟ್ರಪತಿಗಳು ಹಾಗೂ ರಾಜ್ಯಪಾಲರು ಮಾತುಕತೆ ನಡೆಸಿದರು.
ಈ ಸಂದರ್ಭದಲ್ಲಿ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಸತೀಶ್ ಚಂದ್ರ ಶರ್ಮಾ ಸೇರಿದಂತೆ ಇತರೆ ನ್ಯಾಯಾಧೀಶರುಗಳು ಅವರ ಕುಟುಂಬಸ್ಥರೊಂದಿಗೆ ಭಾಗವಹಿಸಿದ್ದರು.