ಬೆಂಗಳೂರು: ಸತ್ಯ ಆದಷ್ಟು ಬೇಗ ಹೊರಬರಲಿದೆ ಎಂದು ಪ್ರಜ್ವಲ್ ರೇವಣ್ಣ ಅವರು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾರೆ.
“ವಿಚಾರಣೆಗೆ ಹಾಜರಾಗಲು ನಾನು ಬೆಂಗಳೂರಿನಲ್ಲಿ ಇಲ್ಲದ ಕಾರಣ, ನಾನು ನನ್ನ ವಕೀಲರ ಮೂಲಕ ಮನವಿ ಸಲ್ಲಿಸಿದ್ದೇನೆ. ಸತ್ಯ ಆದಷ್ಟು ಬೇಗ ಹೊರಬರಲಿದೆ,” ಎಂದು ತಿಳಿಸಿದ್ದಾರೆ.
ವಿಚಾರಣೆಗೆ ಹಾಜರಾಗಲು ನಾನು ಬೆಂಗಳೂರಿನಲ್ಲಿ ಇಲ್ಲದ ಕಾರಣ, ನಾನು ನನ್ನ ವಕೀಲರ ಮೂಲಕ C.I.D ಬೆಂಗಳೂರಿಗೆ ಮನವಿ ಮಾಡಿದ್ದೇನೆ.
— Prajwal Revanna (@iPrajwalRevanna) May 1, 2024
ಸತ್ಯ ಆದಷ್ಟು ಬೇಗ ಹೊರಬರಲಿದೆ.
As I am not in Bangalore to attend the enquiry, I have communicated to C.I.D Bangalore through my Advocate. Truth will prevail soon. pic.twitter.com/lyU7YUoJem
“ನನ್ನ ಕಕ್ಷಿದಾರರಾದ ಪ್ರಜ್ವಲ್ ರವರ ಮನೆಯ ಮೇಲೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ದೀರಿ. ಆದರೆ ನನ್ನ ಕಕ್ಷಿದಾರರಾದ ಪ್ರಜ್ವಲ್ ರೇವಣ್ಣ ರವರು ಬೆಂಗಳೂರಿನಿಂದ ಹೊರಗಡೆ ಪ್ರವಾಸದಲ್ಲಿದ್ದು ಅವರಿಗೆ ನೋಟಿಸ್ನ ಬಗ್ಗೆ ವಿಷಯ ತಿಳಿಸಲಾಗಿದೆ,” ಎಂದು ಅವರು ಅಡ್ವೊಕೇಟ್ ಮನವಿ ಮಾಡಿದ್ದಾರೆ.
ಪ್ರಜ್ವಲ್ ರೇವಣ್ಣ ಬೆಂಗಳೂರಿಗೆ ಬಂದು ತಮ್ಮ ಮುಂದೆ ನೋಟಿಸ್ನ ಸೂಚನೆಯಂತೆ ಹಾಜರಾಗಲು 7 ದಿನಗಳ ಕಾಲಾವಕಾಶ ಅಗತ್ಯವಿರುವುದಾಗಿ ತಿಳಿಸಿದ್ದಾರೆ. ಕಕ್ಷಿದಾರರಿಗೆ ಸುಮಾರು 7 ದಿನಗಳ ಕಾಲಾವಕಾಶ ನೀಡಿ ಮತ್ತೊಂದು ದಿನಾಂಕದಂದು ತಮ್ಮ ಮುಂದೆ ವಿಚಾರಣೆಗಾಗಿ ಹಾಜರಾಗಲು ಅವಕಾಶ ನೀಡಬೇಕೆಂದು ಈ ಮೂಲಕ ತಮ್ಮಲ್ಲಿ ಕಕ್ಷಿದಾರರ ಪರವಾಗಿ ಕೋರುತ್ತೇನೆ ಎಂದು ಹೇಳಿದ್ದಾರೆ.