ಬೆಂಗಳೂರು:
ತುರಹಳ್ಳಿ ಟ್ರೀ ಪಾರ್ಕ್ ಯೋಜನೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಎಂದುಸಂಸ್ಕೃತಿ ಸಚಿವ ಅರವಿಂದ ಲಿಂಬಾವಳಿ ಹೇಳಿದ್ದಾರೆ.
ಕಳೆದ ಕೆಲವು ದಿನಗಳಿಂದ ತುರಹಳ್ಳಿ ಟ್ರೀ ಪಾರ್ಕ್ ಬಗ್ಗೆ ಸಾರ್ವಜನಿಕರು ಭಿನ್ನಾಭಿಪ್ರಾಯ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಇಂದು ಸಹಕಾರ ಸಚಿವ ಎಸ್ ಟಿ ಸೋಮಶೇಖರ್ ಅವರ ಜೊತೆ ತುರಹಳ್ಳಿ ಯೋಜನಾ ಪ್ರದೇಶಕ್ಕೆ ಭೇಟಿ ನೀಡಿ ಸಾರ್ವಜನಿಕರ ಅಹವಾಲು ಆಲಿಸಿದ ನಂತರ ಸಚಿವ ಅರವಿಂದ ಲಿಂಬಾವಳಿ ಈ ವಿಷಯ ಪ್ರಕಟಿಸಿದರು.
ಸ್ಥಳಕ್ಕೆ ಅರಣ್ಯ ಇಲಾಖೆಯ ಉನ್ನತ ಅಧಿಕಾರಿಗಳನ್ನು ಸಹ ಕರೆದೊಯ್ದಿದ್ದ ಸಚಿವರು ಸಾರ್ವಜನಿಕರ ಜೊತೆ ಸಂವಾದ ನಡೆಸಿ ಅವರ ಅಭಿಪ್ರಾಯ ಪಡೆದರು.
ಈಗ ಸದ್ಯಕ್ಕೆ ಈ ಯೋಜನೆಯನ್ನು ಸ್ಥಗಿತಗೊಳಿಸಿದರು ಈ ಹಿಂದೆ 2012ರಲ್ಲಿ ಯೋಜನೆಗಾಗಿ ನಿಗದಿಪಡಿಸಿದ್ದ ಸ್ಥಳದಲ್ಲಿ ಯೋಜನೆಯ ಅನುಷ್ಠಾನ ಮಾಡುವ ಬಗ್ಗೆ ಅರಣ್ಯ ಇಲಾಖೆಯ ಉನ್ನತ ಅಧಿಕಾರಿಗಳ ಸಭೆ ನಡೆಸಿ ಅಂತಿಮ ತೀರ್ಮಾನ ಕೈಗೊಳ್ಳಲಾಗುತ್ತದೆ, ಅರಣ್ಯ ರಕ್ಷಣೆಗಾಗಿ ಈ ಪ್ರದೇಶದ ಸುತ್ತಲೂ ಬೇಲಿ ಹಾಕಿ ಭದ್ರ ಪಡಿಸಲಾಗುತ್ತದೆ ಎಂದು ಅವರು ಹೇಳಿದರು.
ತುರಹಳ್ಳಿ ಟ್ರೀ ಪಾರ್ಕ್ ಯೋಜನೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಸದ್ಯಕ್ಕೆ ಈ ಯೋಜನೆಯನ್ನು ಸ್ಥಗಿತಗೊಳಿಸಿದರೂ ಈ ಹಿಂದೆ 2012ರಲ್ಲಿ ನಿಗದಿಪಡಿಸಿದ್ದ ಸ್ಥಳದಲ್ಲಿ ಟ್ರೀ ಪಾರ್ಕ್ ಯೋಜನೆಯ ಅನುಷ್ಠಾನ ಮಾಡುವ ಬಗ್ಗೆ ಅರಣ್ಯ ಇಲಾಖೆಯ ಉನ್ನತ ಅಧಿಕಾರಿಗಳ ಸಭೆ ನಡೆಸಿ ಅಂತಿಮ ತೀರ್ಮಾನ ಕೈಗೊಳ್ಳಲಾಗುತ್ತದೆ. 2/4 pic.twitter.com/T29kHhvKH0
— Aravind Limbavali (@ArvindLBJP) February 17, 2021
ಆದರೆ ಅದನ್ನು ಪ್ರಾಕೃತಿಕವಾಗಿ ಬಿಡಬೇಕು ಎಂಬ ನಿಮ್ಮ ಸಲಹೆಯನ್ನು ಸಹ ನಾನು ಗೌರವಿಸುತ್ತೇನೆ, ಮುಂದೆ ಇದರ ಬಗ್ಗೆ ಇನ್ನೂ ಹೆಚ್ಚಿನ ವಿಚಾರ ವಿನಿಮಯ ನಡೆಸಿ ಅಂತಿಮ ನಿರ್ಧಾರ ಕೈಗೊಳ್ಳುತ್ತೇನೆ. 4/4
— Aravind Limbavali (@ArvindLBJP) February 17, 2021
ಕಾಡು ಉಳಿಸಬೇಕು ಎಂಬ ಸಾರ್ವಜನಿಕರ ಕಳಕಳಿ ನಿಜಕ್ಕೂ ಮೆಚ್ಚುವಂಥದ್ದು ನಿಮ್ಮನ್ನು ಅದಕ್ಕಾಗಿ ಅಭಿನಂದಿಸುತ್ತೇನೆ ಎಂದು ಅಲ್ಲಿ ನೆರೆದಿದ್ದ ಸಾರ್ವಜನಿಕರಿಗೆ ಸಚಿವರು ಹೇಳಿದರು.
ನಮ್ಮ ಯೋಜನೆಯ ಅಂತಿಮ ಉದ್ದೇಶ ಅರಣ್ಯದ ರಕ್ಷಣೆಯೇ ಆಗಿದೆ, ಆದರೆ ಅದನ್ನು ಪ್ರಾಕೃತಿಕವಾಗಿ ಬಿಡಬೇಕು ಎಂಬ ನಿಮ್ಮ ಸಲಹೆಯನ್ನು ಸಹ ನಾನು ಗೌರವಿಸುತ್ತೇನೆ, ಮುಂದೆ ಇದರ ಬಗ್ಗೆ ಇನ್ನೂ ಹೆಚ್ಚಿನ ವಿಚಾರ ವಿನಿಮಯ ನಡೆಸಿ ಅಂತಿಮ ನಿರ್ಧಾರ ಕೈಗೊಳ್ಳುತ್ತೇನೆ ಎಂದು ಸಚಿವ ಅರವಿಂದ ಲಿಂಬಾವಳಿ ಹೇಳಿದರು.