ಡೆಹ್ರಾಡೂನ್: ಹರಿಯಾಣದಿಂದ (Haryana) ಬರುತ್ತಿದ್ದ ಬಸ್ (Bus) ನೈನಿತಾಲ್ (Nainital) ಜಿಲ್ಲೆಯಲ್ಲಿ ಕಂದಕಕ್ಕೆ ಉರುಳಿದ ಪರಿಣಾಮ ಐವರು ಮಹಿಳೆಯರು, ಒಬ್ಬ ಪುರುಷ ಮತ್ತು ಒಂದು ಮಗು ಸೇರಿದಂತೆ ಒಟ್ಟು 7 ಮಂದಿ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ಇದುವರೆಗೆ 26 ಜನರನ್ನು ರಕ್ಷಿಸಲಾಗಿದ್ದು, ಹೆಚ್ಚಿನ ಕಾರ್ಯಾಚರಣೆ ನಡೆಯುತ್ತಿದೆ ಎಂದು ರಾಜ್ಯ ವಿಪತ್ತು ನಿರ್ವಹಣಾ ಪಡೆ (SDRF) ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ. ಮೃತದೇಹಗಳನ್ನು ಸಿವಿಲ್ ಪೊಲೀಸರಿಗೆ ಹಸ್ತಾಂತರಿಸಲಾಗಿದೆ.
CP Yogeshwar; ಕಾಂಗ್ರೆಸ್ ಇಂದು ಬಹುಮತದಿಂದ ಅಧಿಕಾರಕ್ಕೆ ಬರಲು ನಮ್ಮ ಜಗಳ ಕಾರಣ – ಸಿ.ಪಿ.ಯೋಗೇಶ್ವರ್
ಅಧಿಕಾರಿಗಳ ಪ್ರಕಾರ, ನೈನಿತಾಲ್ನ ವಿಪತ್ತು ನಿಯಂತ್ರಣಾ ಕೊಠಡಿ ಭಾನುವಾರ 30 ರಿಂದ 33 ಜನರನ್ನು ಹೊತ್ತೊಯ್ಯುತ್ತಿದ್ದ ಬಸ್ಸೊಂದು ಕಾಲಾಧುಂಗಿ ರಸ್ತೆಯ ನಲ್ನಿಯಲ್ಲಿ ಕಂದಕಕ್ಕೆ ಉರುಳಿದೆ ಎಂದು ಎಸ್ಡಿಆರ್ಎಫ್ಗೆ ಮಾಹಿತಿ ನೀಡಿದೆ. ಈ ಮಾಹಿತಿಯ ಮೇರೆಗೆ ಕಮಾಂಡೆಂಟ್ ಎಸ್ಡಿಆರ್ಎಫ್ ಮಣಿಕಾಂತ್ ಮಿಶ್ರಾ ಅವರ ಸೂಚನೆಯಂತೆ ಪೋಸ್ಟ್ ರುದ್ರಪುರ, ನೈನಿತಾಲ್ ಮತ್ತು ಖೈರ್ನಾದಿಂದ ಎಸ್ಡಿಆರ್ಎಫ್ ರಕ್ಷಣಾ ತಂಡಗಳು ರಕ್ಷಣೆಗಾಗಿ ಸ್ಥಳಕ್ಕೆ ತೆರಳಿದೆ.
The post Uttarakhand Bus Accident: ಕಂದಕಕ್ಕೆ ಉರುಳಿ ಬಿದ್ದ ಬಸ್: 7 ಮಂದಿ ಸಾವು, 27 ಜನ ಗಂಭೀರ appeared first on Ain Live News.