ಬೆಂಗಳೂರು:
ಕೋವಿಡ್ -19 ವಿರುದ್ಧ ಲಸಿಕೆ ಕಾರ್ಯಕ್ರಮದಲ್ಲಿ ಕರ್ನಾಟಕ ಮಂಗಳವಾರ ಎರಡು ಕೋಟಿಯ ಮೈಲಿಗಲ್ಲು ದಾಟಿದೆ.
“ಕೋವಿಡ್ -19 ಲಸಿಕೆ ಅಭಿಯಾನದಲ್ಲಿ ಕರ್ನಾಟಕವು ಇಂದು 2 ಕೋಟಿ ಸಂಖ್ಯೆ ದಾಟುವ ಮೂಲಕ ಮತ್ತೊಂದು ಮೈಲಿಗಲ್ಲು ಸಾಧಿಸಿದೆ. ಈ ವರ್ಷದ ಅಂತ್ಯದ ವೇಳೆಗೆ ಅರ್ಹ ಪ್ರತಿಯೊಬ್ಬ ನಾಗರಿಕರಿಗೂ ಲಸಿಕೆ ನೀಡುವುದು ನಮ್ಮ ಉದ್ದೇಶವಾಗಿದೆ ಮತ್ತು ಅದನ್ನು ಸಾಧಿಸಲು ನಾವು ಸದಾ ಸಿದ್ದವಿದ್ದೇವೆ.” ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಟ್ವೀಟ್ ಮಾಡಿದ್ದಾರೆ.
Karnataka achieved yet another milestone in Covid-19 vaccination by crossing 2 crore doses today. Our aim is to vaccinate every eligible citizen by the end of this year and we are very much on course to accomplish it. @narendramodi
— B.S. Yediyurappa (@BSYBJP) June 22, 2021
ರಾಜ್ಯ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಕೂಡ ಈ ಮಾಹಿತಿಯನ್ನು ಟ್ವಿಟ್ಟರ್ನಲ್ಲಿ ಹಂಚಿಕೊಂಡಿದ್ದಾರೆ.
“ಕರ್ನಾಟಕ ಇಂದು 2 ಕೋಟಿ ವ್ಯಾಕ್ಸಿನ್ ವಿತರಣೆ ಮುಗಿಸಿತು. ಲಸಿಕೆ ವಿತರಣೆಯಲ್ಲಿ ಕರ್ನಾಟಕ ದಕ್ಷಿಣ ಭಾರತದಲ್ಲಿ No.1 ರಾಜ್ಯವಾಗಿದೆ. ಈ ವರ್ಷದ ಡಿಸೆಂಬರ್ 31ರ ಒಳಗೆ ಕರ್ನಾಟಕದ ಎಲ್ಲ ವಯಸ್ಕರಿಗೂ ವ್ಯಾಕ್ಸಿನ್ ಹಾಕುವ ಗುರಿಗೆ ನಾವು ಬದ್ಧರಾಗಿದ್ದೇವೆ. ಧನ್ಯವಾದಗಳು ನರೇಂದ್ರ ಮೋದಿಜಿ.” ಎಂದು ಸುಧಾಕರ್ ಟ್ವೀಟ್ ಮಾಡಿದ್ದಾರೆ.
ಕರ್ನಾಟಕ ಇಂದು 2 ಕೋಟಿ ವ್ಯಾಕ್ಸಿನ್ ವಿತರಣೆ ಮುಗಿಸಿತು. ಲಸಿಕೆ ವಿತರಣೆಯಲ್ಲಿ ಕರ್ನಾಟಕ ದಕ್ಷಿಣ ಭಾರತದಲ್ಲಿ No.1 ರಾಜ್ಯವಾಗಿದೆ.
— Dr Sudhakar K (@mla_sudhakar) June 22, 2021
ಈ ವರ್ಷದ ಡಿಸೆಂಬರ್ 31ರ ಒಳಗೆ ಕರ್ನಾಟಕದ ಎಲ್ಲ ವಯಸ್ಕರಿಗೂ ವ್ಯಾಕ್ಸಿನ್ ಹಾಕುವ ಗುರಿಗೆ ನಾವು ಬದ್ಧರಾಗಿದ್ದೇವೆ. ಧನ್ಯವಾದಗಳು ನರೇಂದ್ರ ಮೋದಿಜಿ.@narendramodi @bsybjp @drharshvardhan pic.twitter.com/NDAnSPDw55
ರಾಜ್ಯವು ಮಂಗಳವಾರ 3,709 ಹೊಸ ಕೊರೋನಾ ಕೇಸ್ ಹಾಗೂ 139 ಸಾವುಗಳನ್ನು ವರದಿ ಮಾಡಿದೆ. ಒಟ್ಟು ಸೋಂಕು ಸಂಖ್ಯೆ 28,15,029 ಮತ್ತು ಸಾವಿನ ಪ್ರಮಾಣ 34,164 ಕ್ಕೆ ತಲುಪಿದೆ. ಸಕ್ರಿಯ ಪ್ರಕರಣಗಳ ಒಟ್ಟು ಸಂಖ್ಯೆ 1,18,592.