Home ಬೆಂಗಳೂರು ನಗರ ದಿನಸಿ ಮತ್ತು ಇತರ ಅಗತ್ಯ ವಸ್ತುಗಳ ಖರೀದಿಗೆ ವಾಹನ ಬಳಸಬಹುದು: ಪ್ರವೀಣ್ ಸೂದ್

ದಿನಸಿ ಮತ್ತು ಇತರ ಅಗತ್ಯ ವಸ್ತುಗಳ ಖರೀದಿಗೆ ವಾಹನ ಬಳಸಬಹುದು: ಪ್ರವೀಣ್ ಸೂದ್

23
0

ಬೆಂಗಳೂರು:

ಕರ್ನಾಟಕ ಲಾಕ್​ಡೌನ್​ನ ಮೊದಲ ದಿನವಾದ ಇಂದು ಸೋಮವಾರದಂದು, ರಾಜ್ಯ ಪೊಲೀಸರು ದಿನಸಿ ಮತ್ತು ಇತರ ಅಗತ್ಯ ವಸ್ತುಗಳ ಖರೀದಿಗೆ ವಾಹನ ಬಳಸಬಹುದು, ಎಂದು ರಾಜ್ಯ ಪೊಲೀಸ್​ ಮಹಾ ನಿರ್ದೇಶಕ ಪ್ರವೀಣ್​ ಸೂದ್​ ಟ್ವೀಟ್ ಮೂಲಕ ತಿಳಿಸಿದ್ದಾರೆ.

ನಿಮ್ಮ ಹತ್ತಿರದ ಸ್ಥಳಗಳಲ್ಲಿ ಅಗತ್ಯ ವಸ್ತುಗಳನ್ನು ಖರೀದಿಸಿ. ಅಗತ್ಯವಸ್ತು ಖರೀದಿಗೆ ಹಳ್ಳಿಗಳಿಂದ ಪಟ್ಟಣಕ್ಕೆ ಬರಬಹುದು. ತರಕಾರಿ, ಅಥವಾ ಅಗತ್ಯ ವಸ್ತುಗಳ ಖರೀದಿ ಮಾಡಲು ಮನೆ ಸಮೀಪದಲ್ಲಿ ವಾಹನ ಬಳಕೆ ಮಾಡಲು ನಿರ್ಬಂಧವಿಲ್ಲ. ಆದರೆ ಯಾರೂ ಸಹ ಈ ಅವಕಾಶವನ್ನು ದುರ್ಬಳಕೆ ಮಾಡಿಕೊಳ್ಳಬಾರದು ಎಂದು ಅವರು ತಿಳಿಸಿದ್ದಾರೆ. ಈ ಮೂಲಕ ನೀಡಿರುವ ಅವಕಾಶವನ್ನು ದುರ್ಬಳಕೆ ಮಾಡಿಕೊಂಡರೆ ಸಮಸ್ಯೆ ಎದುರಿಸಬೇಕಾಗುತ್ತದೆ ಎಂಬ ಎಚ್ಚರಿಕೆಯನ್ನೂ ರವಾನಿಸಿದ್ದಾರೆ.

Screenshot 241

LEAVE A REPLY

Please enter your comment!
Please enter your name here