ಕರ್ನಾಟಕದ 31ನೇ ಜಿಲ್ಲೆಯಾಗಿ ವಿಜಯನಗರ ಉದಯ
ಬೆಂಗಳೂರು/ವಿಜಯನಗರ:
ಬಳ್ಳಾರಿ ಜಿಲ್ಲೆ ವಿಭಜನೆ ಆಗಿ, ನೂತನ ವಿಜಯನಗರ ಜಿಲ್ಲೆ ಇಂದಿನಿಂದ ಅಧಿಕೃತವಾಗಿ ಅಸ್ತಿತ್ವಕ್ಕೆ ಬಂದಿದೆ. ವಿಜಯನಗರ ಜಿಲ್ಲೆ ಬಗ್ಗೆ ರಾಜ್ಯ ಸರ್ಕಾರ ಅಧಿಕೃತವಾಗಿ ರಾಜ್ಯ ಗೆಜೆಟ್ನಲ್ಲಿ ಪ್ರಕಟಿಸಿದೆ. ಕರ್ನಾಟಕದ 31ನೇ ಜಿಲ್ಲೆಯಾಗಿ ವಿಜಯನಗರ ಉದಯವಾಗಿದೆ.
ವಿಜಯನಗರಕ್ಕೆ ಹೊಸಪೇಟೆ ಜಿಲ್ಲಾ ಕೇಂದ್ರವಾಗಿರಲಿದೆ. ನೂತನ ಜಿಲ್ಲೆಯ ವ್ಯಾಪ್ತಿಗೆ ಆರು ತಾಲೂಕುಗಳು ಬಂದಿವೆ.
ವಿಜಯನಗರ ಜಿಲ್ಲೆಗೆ 6 ತಾಲೂಕುಗಳು: ಹೊಸಪೇಟೆ, ಕೂಡ್ಲಿಗಿ, ಹಗರಿಬೊಮ್ಮನಹಳ್ಳಿ, ಕೊಟ್ಟೂರು, ಹೂವಿನಹಡಗಲಿ. ಹರಪನಹಳ್ಳಿ
ಬಳ್ಳಾರಿ ಜಿಲ್ಲೆಗೆ 5 ತಾಲೂಕುಗಳು: ಬಳ್ಳಾರಿ, ಸಂಡೂರು, ಕಂಪ್ಲಿ, ಕುರುಗೋಡು, ಸಿರುಗುಪ್ಪ.


