ಬೆಂಗಳೂರು: ರಾಜ್ಯದಲ್ಲಿ ಮತದಾರ ವೋಟರ್ ಐಡಿ ಪರಿಷ್ಕರಣೆ (Voter ID Scam) ಚರ್ಚೆ ತೀವ್ರತೆ ದಿನದಿಂದ ದಿನಕ್ಕೆ ತಾರಕಕ್ಕೇರುತ್ತಿದೆ. ರಾಜ್ಯದ ವಿವಿಧ ಜಿಲ್ಲೆಗಳಿಂದಲೂ ಮತಾದರರ ಮಾಹಿತಿ ಸಂಗ್ರಹ ಅಕ್ರಮ ಆರೋಪ ಕೇಳಿಬರುತ್ತಿದೆ. ಇದೇ ವಿಚಾರ ಕಳೆದ ಕೆಲ ದಿನಗಳಿಂದ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ವಾಗ್ಯುದ್ದಕ್ಕು ಕಾರಣವಾಗಿದೆ ಮತ್ತು ದೂರುಗಳು ದಾಖಲಾಗುತ್ತಿವೆ. ಹೀಗೆಯೇ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದಲ್ಲಿ (Rajarajeshwari nagar assembly constituency) ವೋಟರ್ ಐಡಿ ಪರಿಷ್ಕರಣೆಯಲ್ಲಿ ಅಕ್ರಮವಾಗಿದೆ ಎಂದು ಆರೋಪಸಿ ಕೆ.ಆರ್.ವೃತ್ತ ಬಳಿ ಇರುವ ಚುನಾವಣಾ ಆಯೋಗಕ್ಕೆ ಕಾಂಗ್ರೆಸ್ (Congress) ಸಂಸದ ಡಿ.ಕೆ.ಸುರೇಶ್ (DK Suresh) ಇಂದು (ಡಿ.7) ದೂರು ನೀಡಿದ್ದಾರೆ.
ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಸಂಸದ ಡಿ. ಕೆ ಸುರೇಶ್, ಆರ್.ಆರ್.ನಗರದಲ್ಲಿ ನಕಲಿ ಮತದಾರರ ಹೆಸರು ಸೇರ್ಪಡೆಯಾಗಿದೆ. ಪ್ರಮುಖವಾಗಿ ಮತಪಟ್ಟಿಯಿಂದ ಒಕ್ಕಲಿಗರ ಮತದಾರರ ಹೆಸರು ತೆಗೆಯಲಾಗಿದೆ. ಕಾಂಗ್ರೆಸ್ ಬೆಂಬಲಿತ ಮತದಾರರ ಹೆಸರುಗಳನ್ನು ಕೂಡ ಡಿಲೀಟ್ ಮಾಡಲಾಗಿದೆ. ಚಿಲುಮೆ ಸಂಸ್ಥೆ ಜೊತೆ ಕೆಲ ಬಿಜೆಪಿ ನಾಯಕರು ಸೇರಿ ಅಕ್ರಮವೆಸಗಿದ್ದಾರೆ. ಈ ಬಗ್ಗೆ ಚುನಾವಣಾ ಆಯೋಗಕ್ಕೆ ಸಂಪೂರ್ಣ ಮಾಹಿತಿ ನೀಡಿದ್ದೇವೆ ಎಂದು ತಿಳಸಿದರು.
ಇದನ್ನೂ ಓದಿ: ಧಾರವಾಡ: ಮತದಾರರ ಪಟ್ಟಿ ಪರಿಷ್ಕರಣೆ, ಸಮೀಕ್ಷೆ ಕಾರ್ಯದಲ್ಲಿ ಬೇಜವಾಬ್ದಾರಿ, ಎಸ್ಡಿಎ ಅಮಾನತು
ಜನವರಿ 22ರಿಂದ ನವೆಂಬರ್ವರೆಗೆ ಸಾಕಷ್ಟು ಹೆಸರು ಸೇರ್ಪಡೆ ಮಾಡಿದ್ದಾರೆ. ಹೊಸ ಸೇರ್ಪಡೆ ವಿಚಾರವನ್ನು ಆಯುಕ್ತರ ಗಮನಕ್ಕೆ ತಂದಿದ್ದೇವೆ. 46ಸಾವಿರ ಮತದಾರರ ಹೆಸರು ಡಿಲೀಟ್ ಮಾಡಲಾಗಿದೆ. 26 ಸಾವಿರ ಮತದಾರರ ಹೆಸರನ್ನು ಡಿಲೀಟ್ ಮಾಡಿರುವ ಬಗ್ಗೆ ಮಾಹಿತಿ ನೀಡಿದ್ದಾರೆ. ಫಾರ್ಮ್ ನಂಬರ್ 6 ಹಾಗೂ 7ಕ್ಕೆ ಸಹಿ ಆಗಬೇಕು. ಆದರೆ ಯಾವುದೇ ಸಹಿ ಇಲ್ಲದೆ ಡಿಲೀಟ್ ಮಾಡಲಾಗಿದೆ ಎಂದು ಆರೋಪಿಸಿದರು.
ಈ ವೇಳೆ ಕಾಂಗ್ರೆಸ್ ಮುಖಂಡರಾದ ಹನುಮಂತರಾಯಪ್ಪ, ಆರ್.ಆರ್.ನಗರ ಪರಾಜಿತ ಅಭ್ಯರ್ಥಿ ಕುಸುಮ ಉಪಸ್ಥಿತರಿದ್ದರು.
ಯಶವಂತಪುರದಲ್ಲಿ ಕೈ-ಕಮಲ ಕಾರ್ಯಕರ್ತರ ನಡುವೆ ಫೈಟ್
ಡಿ.4 ರಂದು ಯಶವಂತಪುರ ವಿಧಾನಸಭಾ ಕ್ಷೇತ್ರದ ಬಿ.ಕೆ. ನಗರದ 8ನೇ ಅಡ್ಡರಸ್ತೆಯಲ್ಲಿ ಕೆಲವರು ಮತದಾರರ ಮಾಹಿತಿ ಕಲೆಹಾಕುತ್ತಿದ್ದರು. ಆಮಿಷವೊಡ್ಡಿ ಮತದಾನ ಗುರುತಿನ ಚೀಟಿ ಪಡೆದುಕೊಳ್ಳಲು ಬಿಜೆಪಿ ಕಾರ್ಯಕರ್ತರನ್ನು, ಮಾಹಿತಿ ಪಡೆಯುತ್ತಿದ್ದವರನ್ನು ಹಿಡಿದು ತರಾಟೆಗೆ ತೆಗೆದುಕೊಂಡಿದ್ದರು.
ಈ ವೇಳೆ ಅವರನ್ನು ಪರಿಶೀಲಿಸಿದಾಗ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಮತದಾರರ ಪಟ್ಟಿ, ಸಂಸದ ಡಿ.ಕೆ. ಸುರೇಶ್ ಹಾಗೂ ಎಸ್. ಕುಸುಮಾ ಅವರ ಫೋಟೊಗಳಿದ್ದವು. ಈ ವೇಳೆ ಮಾಹಿತಿ ಸಂಗ್ರಹಿಸುತ್ತಿದ್ದವರು ಕುಸುಮಾ, ಡಿ.ಕೆ ಸುರೇಶ್ ಇಬ್ಬರು ನಾಯಕರು ಹೇಳಿದಂತೆ ಕ್ಷೇತ್ರದಲ್ಲಿ ಕೆಲಸ ಮಾಡಿದ್ದೇವೆ ಎಂದು ಹೇಳಿದ್ದರು.
ಇದನ್ನೂ ಓದಿ: ದಾವಣಗೆರೆ ಜಿಲ್ಲೆಯಲ್ಲೂ ಕೆಲ ಮತದಾರರ ಹೆಸರು ಡಿಲೀಟ್ ಆಗಿವೆ: ಡಿಸಿ ಶಿವಾನಂದ ಕಾಪಶಿ
ಚಿಲುಮೆ ಸಂಸ್ಥೆಯ ಅಕ್ರಮ ಬಳಿಕ ಅರಿವು ಮೂಡಿಸಲು ಸೂಚಿಸಿದ್ದಾರೆ. ಮತದಾರರಿಗೆ ಅರಿವು ಮೂಡಿಸಲು ನಮ್ಮ ನಾಯಕರು ಹೇಳಿದ್ದಾರೆ ಎಂದು ಕಾಂಗ್ರೆಸ್ ಮುಖಂಡ ಗೋಪಾಲಕೃಷ್ಣ ಹೇಳಿದ್ದರು. ಇದಾದ ಬಳಿಕ ಬಿಜೆಪಿಯ ಮಾಜಿ ಕಾರ್ಪೊರೇಟರ್ ವೆಂಕಟೇಶ್ ನೇತೃತ್ವದಲ್ಲಿ ಬಿಜೆಪಿ ಕಾರ್ಯಕರ್ತರು ಮತ್ತು ಕಾಂಗ್ರೆಸ್ ಕಾರ್ಯಕರ್ತರು ಪೊಲೀಸ್ ಠಾಣೆ ಎದುರು ಪ್ರತಿಭಟನೆ ಮಾಡಿದ್ದರು. ಎಸ್. ಕುಸುಮಾ ನೇತೃತ್ವದಲ್ಲಿ ಎರಡೂ ಪಕ್ಷಗಳ ಕಾರ್ಯಕರ್ತರು, ಪರಸ್ಪರ ಆರೋಪ ಪ್ರತ್ಯಾರೋಪ ಮಾಡಿ ಘೋಷಣೆ ಕೂಗಿದ್ದರು.
ರಾಜ್ಯದ ಮತ್ತಷ್ಟು ಸುದ್ದುಇಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ