ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದ ಘಟನೆ ಬಾಗಲಕೋಟೆಯ ಕಿಲ್ಲಾ ಓಣಿಯಲ್ಲಿ ಕಳೆದ ರಾತ್ರಿ ನಡೆದಿದ್ದು ಸದ್ಯ ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡದಂತಿದೆ.
ಶಾಂತವಾಗಿ ನಡೆಯುತ್ತಿದ್ದ ಮೆರವಣಿಗೆ ವೇಳೆ ಕಲ್ಲು ತೂರಿದ್ದಾರೆ ಎಂದು ಹಿಂದೂ ಸಂಘಟನೆಗಳ ನಾಯಕರು ದೂರಿದ್ದಾರೆ.
ಮೆರವಣಿಗೆ ಸಾಗುತ್ತಿದ್ದವರ ಮೇಲೆ ಮಸೀದಿ ಕಡೆಯಿಂದ ಕಲ್ಲು ಬಂದಿದೆ.ನಮ್ಮ ಕಾರ್ಯಕರ್ತರ ಜೊತೆಗೆ ಬೆಳಗಾವಿ ಎಸ್ಪಿ, ಪೊಲೀಸರ ಮೇಲೂ ಕಲ್ಲು ಬಿದ್ದಿದೆ ಎಂದು ಹಿಂದೂ ಮುಖಂಡರು ಹೇಳಿದ್ದಾರೆ.
ಕಲ್ಲು ತೂರಾಟ, ಚಪ್ಪಲಿ ಎಸೆತ ಘಟನೆಗೆ ಸಂಬಂಧಿಸಿ 8 ಮಂದಿಯನ್ನು ಬಂಧಿಸಲಾಗಿದೆ ಎಂದು ಬಾಗಲಕೋಟೆ ಜಿಲ್ಲೆ ಎಸ್ ಪಿ ಸಿದ್ಧಾರ್ಥ್ ಗೋಯೆಲ್ ತಿಳಿಸಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.
