Home ಬೆಂಗಳೂರು ನಗರ ಅಸಮಾಧಾನ ಮಾಡಿಕೊಂಡರೆ ನಾನೇನು ಮಾಡಲಿ: ಡಿಕೆ ಶಿವಕುಮಾರ್‌

ಅಸಮಾಧಾನ ಮಾಡಿಕೊಂಡರೆ ನಾನೇನು ಮಾಡಲಿ: ಡಿಕೆ ಶಿವಕುಮಾರ್‌

58
0
DKS Shivakumar

ಬೆಂಗಳೂರು:

ಸಚಿವ ಸ್ಥಾನ ಕೈತಪ್ಪಿದ ಹಿನ್ನೆಲೆಯಲ್ಲಿ ಕೆಲವರು ಅಸಮಾಧಾನಗೊಂಡಿದ್ದಾರೆ. ಆದರೆ, ಇದಕ್ಕೆ ನಾನೇನು ಮಾಡಲು ಸಾಧ್ಯ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಶನಿವಾರ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನೂ ಕೂಡ ಸಾಕಷ್ಟು ಬಾರಿ ಅವಕಾಶದಿಂದ ವಂಚಿತನಾಗಿದ್ದೆ. ಧರಂಸಿಂಗ್, ಸಿದ್ದರಾಮಯ್ಯ ಅವರ ಸಂಪುಟದಲ್ಲಿ ನನಗೂ ಅವಕಾಶ ಸಿಕ್ಕಿರಲಿಲ್ಲ. ಆದರೆ, ನಾನು ತಾಳ್ಮೆಯಿಂದ ಕಾದಿದ್ದೆ ಎಂದು ಹೇಳಿದರು.

ಸಚಿವ ಸ್ಥಾನ ಸಿಗದ್ದಕ್ಕೆ ಅಸಮಾಧಾನ ಮಾಡಿಕೊಂಡರೆ ನಾನು ಏನು ಮಾಡಲು ಆಗುತ್ತೆ? ಮಾತನಾಡುವವರು ಮಾತನಾಡಲಿ. ನಾನೇನು ಮಾತನಾಡುವುದಿಲ್ಲ ಎಂದು ತಿಳಿಸಿದರು.

ಕಳೆದ ಶನಿವಾರ ಕಂಠೀರವ ಸ್ಟೇಡಿಯಂನಲ್ಲಿ ಸಿಎಂ, ಡಿಸಿಎಂ ಹಾಗೂ 10 ಮಂದಿ ಸಚಿವರು ಪ್ರಮಾಣ ವಚನ ಸ್ವೀಕರಿಸಿದ್ದರೆ, ಇಂದು ರಾಜಭವನದಲ್ಲಿ ಗಾಜಿನ ಮನೆಯಲ್ಲಿ 24 ಮಂದಿ ಮಂತ್ರಿಗಳಾಗಿ ಪ್ರಮಾಣವಚನ ಸ್ವೀಕರಿಸಿದರು.

LEAVE A REPLY

Please enter your comment!
Please enter your name here