White topping negligence on Hennur-Bagalur road: ಹೆಣ್ಣೂರು–ಬಾಗಲೂರು ರಸ್ತೆಯ ವೈಟ್ ಟಾಪಿಂಗ್ ನಿರ್ಲಕ್ಷ್ಯ: ಗುತ್ತಿಗೆದಾರರು ಮತ್ತು ಎಂಜಿನಿಯರ್ಗಳ ವಿರುದ್ಧ ಕ್ರಮಕ್ಕೆ ಸಿಎಂ ಸಿದ್ದರಾಮಯ್ಯ ಸೂಚನೆ
ಬೆಂಗಳೂರು: ಹೆಣ್ಣೂರು–ಬಾಗಲೂರು ರಸ್ತೆಯಲ್ಲಿ ವೈಟ್ ಟಾಪಿಂಗ್ ಮಾಡಲಾಗಿದ್ದರೂ, ಈಗಾಗಲೇ ರಸ್ತೆಯಲ್ಲಿ ಗುಂಡಿಗಳು ಕಂಡುಬಂದಿರುವುದಕ್ಕೆ ಸಿಎಂ ಸಿದ್ದರಾಮಯ್ಯ ಗರಂ ಆಗಿ, ಗುತ್ತಿಗೆದಾರರು ಹಾಗೂ ಎಂಜಿನಿಯರ್ಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮಕ್ಕೆ ಸೂಚಿಸಿದರು.
ಅಧಿಕಾರಿಗಳು ಸಿಎಂಗೆ ನೀಡಿದ ಮಾಹಿತಿಯ ಪ್ರಕಾರ, ಒಮ್ಮೆ ರಸ್ತೆ ವೈಟ್ ಟಾಪಿಂಗ್ ಗುತ್ತಿಗೆಗೆ ಒಪ್ಪಿಸಿದ ಮೇಲೆ 2–3 ವರ್ಷಗಳ ಕಾಲ ಅದರ ನಿರ್ವಹಣೆಗಾಗಿಯೇ ಗುತ್ತಿಗೆದಾರರು ಜವಾಬ್ದಾರರಾಗಿರುತ್ತಾರೆ. ಈ ಅವಧಿಯಲ್ಲಿ ನಾಗರಿಕ ಸಂಸ್ಥೆಯಿಂದ ಯಾವುದೇ ಹಣ ನೀಡಲಾಗುವುದಿಲ್ಲ. ಆದರೂ ಗುತ್ತಿಗೆದಾರರು ತಮ್ಮ ಜವಾಬ್ದಾರಿಯನ್ನು ನಿರ್ಲಕ್ಷ್ಯ ಮಾಡುತ್ತಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.
ಇದನ್ನು ಗಂಭೀರವಾಗಿ ಪರಿಗಣಿಸಿದ ಸಿಎಂ, ವೈಟ್ ಟಾಪಿಂಗ್ ಗುತ್ತಿಗೆದಾರರು ಮತ್ತು ಸಂಬಂಧಿತ ಎಂಜಿನಿಯರ್ಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಸೂಚಿಸಿದರು. ಸಮರ್ಪಕ ರಸ್ತೆ ನಿರ್ವಹಣೆಯನ್ನು ಖಚಿತಪಡಿಸಲು ಗುತ್ತಿಗೆದಾರರು ಜವಾಬ್ದಾರಿಯಾಗಿರಬೇಕೆಂದು ಅವರು ಸ್ಪಷ್ಟಪಡಿಸಿದರು.
