ಬೆಂಗಳೂರು:
ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಪ್ರಚಂಡ ಜಯಭೇರಿ ಬಾರಿಸಿರುವ ಕಾಂಗ್ರೆಸ್ ಶಾಸಕಾಂಗ ಪಕ್ಷದ (ಸಿಎಲ್ ಪಿ) ಸಭೆ ಇಂದು ಸಂಜೆ ನಡೆಯಲಿದ್ದು, ನೂತನ ಮುಖ್ಯಮಂತ್ರಿಯ ಹೆಸರನ್ನು ನಿರ್ಧರಿಸುವ ಸಾಧ್ಯತೆ ಇದೆ.
ಗೆದ್ದ ಅಭ್ಯರ್ಥಿಗಳನ್ನು ಬೆಂಗಳೂರಿಗೆ ಕರೆದೊಯ್ಯಲು ರಾಜ್ಯದ ದೂರದ ಪ್ರದೇಶಗಳಲ್ಲಿಯೂ ವಿಶೇಷ ವ್ಯವಸ್ಥೆ ಮಾಡಲಾಗಿದೆ. ಈ ಕಾರ್ಯತಂತ್ರಕ್ಕಾಗಿ ವೀಕ್ಷಕರನ್ನು ಸಹ ನೇಮಿಸಲಾಗಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
ಇದು ನಮ್ಮ ಗೆಲವಲ್ಲ, ಕರ್ನಾಟಕ ರಾಜ್ಯದ ಜನರ ಗೆಲುವು. ಮೂರೂವರೆ ವರ್ಷದಿಂದ ಕರ್ನಾಟಕಕ್ಕೆ ಹಿಡಿದಿದ್ದ ಗ್ರಹಣ ಬಿಟ್ಟಿದೆ. ಜನರ ಸಂಕಷ್ಟಗಳು ಕೊನೆಯಾಗುವ ದಿನ ಬಂದಿದೆ.
— Karnataka Congress (@INCKarnataka) May 13, 2023
ರಾಜ್ಯಕ್ಕೆ ಹಿಡಿದಿದ್ದ ಭ್ರಷ್ಟಾಚಾರ, ದುರಾಡಳಿತದ ಗ್ರಹಣ ಬಿಡಿಸಿದ ಕರ್ನಾಟಕದ ಜನತೆಗೆ ಕಾಂಗ್ರೆಸ್ ಪಕ್ಷದ ಪರವಾಗಿ ಹಾಗೂ ವಯಕ್ತಿಕವಾಗಿ ಹೃದಯಪೂರ್ವಕ ಧನ್ಯವಾದಗಳನ್ನು… pic.twitter.com/r5GEE7L4aq
2024 ರ ಲೋಕಸಭೆ ಚುನಾವಣೆಗೂ ಮುಂಚಿತವಾಗಿ ಸ್ಪಷ್ಪ ಬಹುಮತದೊಂದಿಗೆ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತಿದ್ದು, ಬಿಜೆಪಿಯನ್ನು ದಕ್ಷಿಣ ಭಾರತದಿಂದ ಹೊರಹಾಕುವಲ್ಲಿ ಯಶಸ್ವಿಯಾಗಿದೆ. ಸಾಮೂಹಿಕ ನಾಯಕತ್ವ ಮತ್ತು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ನೇತೃತ್ವದಲ್ಲಿ ಆಕ್ರಮಣಕಾರಿ ಪ್ರಚಾರದ ನಂತರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ನಿರ್ಣಾಯಕ ಗೆಲುವು ಸಾಧಿಸಿದೆ.
ಜನ ನಮ್ಮ ಮೇಲೆ ವಿಶ್ವಾಸ ಇಟ್ಟು ಆಶೀರ್ವಾದ ಮಾಡಿದ್ದಾರೆ, ಅವರ ನಿರೀಕ್ಷೆಗೆ ತಕ್ಕಂತೆ ಕೆಲಸ ಮಾಡಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇವೆ.
— Karnataka Congress (@INCKarnataka) May 13, 2023
ಈ ಚುನಾವಣೆಯಲ್ಲಿ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ, ನಾಯಕರಾದ ರಾಹುಲ್ ಗಾಂಧಿ, ಸೋನಿಯಾ ಗಾಂಧಿ, ಪ್ರಿಯಾಂಕಾ ಗಾಂಧಿ, ವೇಣುಗೋಪಾಲ್ ಮತ್ತು ಸುರ್ಜೆವಾಲಾ ಅವರು ಕಾರ್ಯತಂತ್ರ ರೂಪಿಸುವುದು,… pic.twitter.com/l1QkFutvYC
75 ವರ್ಷದ ಸಿದ್ದರಾಮಯ್ಯ ಮತ್ತು ಕನಕಪುರದಿಂದ ಒಂದು ಲಕ್ಷಕ್ಕೂ ಅಧಿಕ ಮತಗಳಿಂದ ಗೆದ್ದಿರುವ ಪಕ್ಷದ ಟ್ರಬಲ್ ಶೂಟರ್ ಶಿವಕುಮಾರ್ ಇಬ್ಬರೂ ಮುಖ್ಯಮಂತ್ರಿ ಹುದ್ದೆಯ ಮುಂಚೂಣಿಯಲ್ಲಿದ್ದಾರೆ. ಇವರಿಬ್ಬರಲ್ಲಿ ಯಾರು ರಾಜ್ಯದ ಮುಂದಿನ ಸಿಎಂ ಆಗ್ತಾರೆ ಎಂಬುದು ಇಂದು ತೀರ್ಮಾನವಾಗಲಿದೆ.