Home ಬೆಂಗಳೂರು ನಗರ Will not prevent any activities under the basic wishes of the Constitution:...

Will not prevent any activities under the basic wishes of the Constitution: CM Siddaramaiah | ಸಂವಿಧಾನದ ಮೂಲ ಆಶಯಗಳಡಿ ನಡೆಯುವ ಯಾವುದೇ ಚಟುವಟಿಕೆಗಳನ್ನು ತಡೆಯುವುದಿಲ್ಲ: ಸಿಎಂ ಸಿದ್ದರಾಮಯ್ಯ

28
0
Chief Minister Siddaramaiah to launch Anna Bhagya Yojana on July 10
Chief Minister Siddaramaiah

ಬೆಂಗಳೂರು:

ರಾಜ್ಯ ಸರಕಾರವು ಸಂವಿಧಾನದ ಮೂಲ ಆಶಯಗಳಡಿ ನಡೆಸುವ ಚಟುವಟಿಕೆಗಳನ್ನು ನಿಲ್ಲಿಸುವ ಅಥವಾ ತಡೆಯುವ ಯಾವುದೇ ಕೆಲಸವನ್ನು ಮಾಡುವುದಿಲ್ಲ. ಕಥೆ, ಕಾವ್ಯ, ನಾಟಕ, ಸಂಗೀತ ಮುಂತಾದ ಸೃಜನಶೀಲ ಅಭಿವ್ಯಕ್ತಿಯನ್ನು ಯಾವುದೇ ಕಾರಣಕ್ಕೂ ತಡೆಯುವ ಕೆಲಸವನ್ನು ಮಾಡುವುದಿಲ್ಲ. ನಾವು ಸಂವಿಧಾನದ ಮೂಲಸ್ಫೂರ್ತಿಗೆ ವಿರುದ್ಧವಾಗದಂತೆ ನಡೆಯುವ ಎಲ್ಲ ಅಭಿವ್ಯಕ್ತಿಗಳ ಪರವಾಗಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಈ ಬಗ್ಗೆ ಪ್ರಕಟನೆ ಹೊರಡಿಸಿರುವ ಮುಖ್ಯಮಂತ್ರಿ, ಕೆಳಹಂತದ ಪೊಲೀಸ್ ಅಧಿಕಾರಿಗಳ ತಪ್ಪು ತಿಳಿವಳಿಕೆಯ ಕಾರಣಕ್ಕೆ ಒಂದೆರಡು ಅನಾವಶ್ಯಕವಾದ ಗೊಂದಲಗಳು ನಿರ್ಮಾಣವಾಗಿವೆ ಎಂಬುದು ನನ್ನ ಗಮನಕ್ಕೆ ಬಂದಿದೆ. ಈ ಕುರಿತು ಯಾವುದೇ ಗೊಂದಲಗಳು ಸೃಷ್ಟಿಯಾಗದಂತೆ ನೋಡಿಕೊಳ್ಳಬೇಕೆಂದು ನಾನು ಪೊಲೀಸ್ ಮಹಾನಿರ್ದೇಶಕರಿಗೆ ಸೂಕ್ತ ಸೂಚನೆಗಳನ್ನು ನೀಡಿರುತ್ತೇನೆ ಎಂದು ತಿಳಿಸಿದ್ದಾರೆ.

ಸಂವಿಧಾನದ ಆಶಯಗಳನ್ನು ಎತ್ತಿ ಹಿಡಿಯುವ ಕೆಲಸಗಳ ಜೊತೆ ಸರಕಾರವು ಸದಾ ನಿಲ್ಲುತ್ತದೆ ಎಂಬುದನ್ನು ತಿಳಿಸಬಯಸುತ್ತೇನೆ. ಆದ್ದರಿಂದ ಯಾವುದೇ ರೀತಿಯ ಗೊಂದಲಗಳನ್ನು ಸೃಷ್ಟಿಸಬಾರದೆಂದು, ಅಭಿವ್ಯಕ್ತಿ ಸ್ವಾತಂತ್ರ್ಯದ ವಿಚಾರದಲ್ಲಿ ಆತಂಕಿತರಾಗಬಾರದೆಂದು ನಾಡಬಾಂಧವರಲ್ಲಿ ವಿನಂತಿಸುತ್ತೇನೆ ಎಂದು ಮುಖ್ಯಮಂತ್ರಿ ಪ್ರಕಟನೆಯಲ್ಲಿ ಹೇಳಿದ್ದಾರೆ.

LEAVE A REPLY

Please enter your comment!
Please enter your name here