Home ಬೆಂಗಳೂರು ನಗರ ರಾಜಕೀಯದಿಂದ ನಿವೃತ್ತಿಯಾಗುವುದಿಲ್ಲ, ಆದರೆ, ಮುಂಬರುವ ಚುನಾವಣೆಯಲ್ಲಿ ಸ್ಪರ್ಧೆಗಿಳಿಯವುದಿಲ್ಲ : ಮಾಜಿ ಸಿಎಂ ಸಿದ್ದರಾಮಯ್ಯ

ರಾಜಕೀಯದಿಂದ ನಿವೃತ್ತಿಯಾಗುವುದಿಲ್ಲ, ಆದರೆ, ಮುಂಬರುವ ಚುನಾವಣೆಯಲ್ಲಿ ಸ್ಪರ್ಧೆಗಿಳಿಯವುದಿಲ್ಲ : ಮಾಜಿ ಸಿಎಂ ಸಿದ್ದರಾಮಯ್ಯ

27
0
Karnataka Assembly Election 2023 Siddaramaiah vote

ಬೆಂಗಳೂರು:

ರಾಜಕೀಯದಿಂದ ನಿವೃತ್ತಿಯಾಗುವುದಿಲ್ಲ, ಆದರೆ, ಮುಂಬರುವ ಚುನಾವಣೆಯಲ್ಲಿ ಸ್ಪರ್ಧೆಗಿಳಿಯವುದಿಲ್ಲ ಎಂದು ಮಾಜಿ ಮುಖ್ಯಂತ್ರಿ ಹಾಗೂ ಕಾಂಗ್ರೆಸ್ ಹಿರಿಯ ನಾಯಕ ಸಿದ್ದರಾಮಯ್ಯ ಅವರು ಬುಧವಾರ ಹೇಳಿದ್ದಾರೆ.

ರಾಜ್ಯ ವಿಧಾನಸಭಾ ಚುನಾವಣೆಗೆ ಮತದಾನ ಪ್ರಕ್ರಿಯೆ ಪ್ರಗತಿಯಲ್ಲಿದ್ದು, ವರುಣಾ ಕ್ಷೇತ್ರದಲ್ಲಿ ಸಿದ್ದರಾಮಯ್ಯ ಅವರು ತಮ್ಮ ಮತಹಕ್ಕು ಚಲಾಯಿಸಿದರು.

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಲಸ ಮಾಡುವ ಪಕ್ಷಕ್ಕೆ ಮತ ನೀಡುವಂತೆ ಮತದಾರರಲ್ಲಿ ನಾನು ಮನವಿ ಮಾಡಿಕೊಳ್ಳುತ್ತಿದ್ದೇನೆ. ರಾಷ್ಟ್ರದ ಭವಿಷ್ಯ ಈ ಚುನಾವಣೆಯಲ್ಲಿ ಅಡಗಿದೆ. ಈ ಬಾರಿ ಜನರು ಕಾಂಗ್ರೆಸ್ ಪಕ್ಷಕ್ಕೆ ಮತ ಹಾಕುವ ವಿಶ್ವಾಸವಿದ್ದು, ಚುನಾವಣೆಯಲ್ಲಿ ಕಾಂಗ್ರೆಸ್ 130ಕ್ಕೂ ಹೆಚ್ಚು ಸ್ಥಾನಗಳಲ್ಲಿ ಗೆಲ್ಲುವ ವಿಶ್ವಾಸವಿದೆ. ಈ ಸಂಖ್ಯೆ 150ಕ್ಕೆ ಹೋದರೂ ಹೋಗಬಹುದು ಎಂದು ಹೇಳಿದರು.

ಮತದಾರರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಶೇ.60ಕ್ಕೂ ಹೆಚ್ಚು ಮತಗಳನ್ನು ಪಡೆಯುವ ವಿಶ್ವಾಸ ನನಗಿದೆ. ಕಾಂಗ್ರೆಸ್ ಸ್ವಂತ ಬಲದಿಂದ ಸರ್ಕಾರ ರಚಿಸಲಿದೆ. ರಾಜಕೀಯದಿಂದ ನಾನು ನಿವೃತ್ತಿಯಾಗುವುದಿಲ್ಲ. ಆದರೆ, ಮುಂಬರವ ಚುನಾವಣೆಗೆ ಸ್ಪರ್ಧಿಸುವುದಿಲ್ಲ. ಇದು ನನ್ನ ಕೊನೆಯ ಚುನಾವಣೆ ಎಂದು ತಿಳಿಸಿದರು.

LEAVE A REPLY

Please enter your comment!
Please enter your name here