ಡೆಹ್ರಾಡೂನ್: ಉತ್ತರಪ್ರದೇಶ (Uttar Pradesh) ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ (Yogi Adityanath) ಅವರು ಮೂರು ದಿನಗಳ ಕಾಲ ಉತ್ತರಾಖಂಡ (Uttarakhand) ಪ್ರವಾಸ ಕೈಗೊಂಡಿದ್ದು, ಕೊನೆಯ ದಿನವಾದ ಕೇದಾರನಾಥ ದೇವಾಲಯಕ್ಕೆ (Kedarnath Temple) ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು.
ಈ ವೇಳೆ ನೆರೆದಿದ್ದ ಜನರು ಜೈ ಶ್ರೀರಾಮ್ ಎಂದು ಘೋಷಣೆ ಕೂಗಿದರು ಮತ್ತು ಮುಖ್ಯಮಂತ್ರಿಗಳಿಗೆ ಶುಭಾಶಯ ಕೋರಿದರು. ಬದರಿ ಕೇದಾರ ದೇವಸ್ಥಾನ ಸಮಿತಿ ಅಧ್ಯಕ್ಷ ಅಜಯ್ ಅಜಯೇಂದ್ರ ಹಾಗೂ ಇತರ ಗಣ್ಯರು ಕೇದಾರನಾಥ ಹೆಲಿಪ್ಯಾಡ್ಗೆ ಆಗಮಿಸಿ ಪುಷ್ಪಗುಚ್ಛ ನೀಡಿ ಯೋಗಿ ಆದಿತ್ಯನಾಥ್ ಅವರನ್ನು ಬರಮಾಡಿಕೊಂಡರು.
CP Yogeshwar; ಕಾಂಗ್ರೆಸ್ ಇಂದು ಬಹುಮತದಿಂದ ಅಧಿಕಾರಕ್ಕೆ ಬರಲು ನಮ್ಮ ಜಗಳ ಕಾರಣ – ಸಿ.ಪಿ.ಯೋಗೇಶ್ವರ್
ಅರ್ಚಕ ಸಮುದಾಯದವರು ಯೋಗಿ ಆದಿತ್ಯನಾಥ್ ಅವರನ್ನು ಸಾಂಪ್ರದಾಯಿಕ ಮಂತ್ರ ಪಠಣದೊಂದಿಗೆ ಅಭಿನಂದಿಸಿದರು. ಕೇದಾರನಾಥ ದೇಗುಲಕ್ಕೆ ಭೇಟಿ ನೀಡಿದ ಯೋಗಿ ಆದಿತ್ಯನಾಥ್ ದೇಶ ಮತ್ತು ರಾಜ್ಯದ ಜನತೆಯ ಒಳಿತಿಗಾಗಿ ಪ್ರಾರ್ಥಿಸಿದರು.
The post Yogi Adityanath: ಕೇದಾರನಾಥ ದೇವಾಲಯಕ್ಕೆ ಭೇಟಿ ನೀಡಿದ ಯೋಗಿ ಆದಿತ್ಯನಾಥ್ appeared first on Ain Live News.